ಬ್ರೇಕಿಂಗ್ ನ್ಯೂಸ್
07-08-21 02:39 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 7: ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ. ಪಕ್ಷದವರೇ ನಮಗೆ ಮುಳ್ಳಾಗಿದ್ದಾರೆ. ನಾವು ಬೆಂಬಲಿಸಿ ಬೆಳೆಸಿದವರೇ ಮುಳ್ಳಾಗಿ ಪರಿಣಮಿಸಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದ ಮುಖಂಡರಿಂದಲೇ ನನಗೆ ತೊಂದರೆ ಆಯ್ತು. ಇಲ್ಲದಿದ್ರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ಪಟ್ಟಿಯಲ್ಲಿ ನನ್ನ ಹೆಸರಿತ್ತು, ಕೊನೇ ಕ್ಷಣದಲ್ಲಿ ಕೈಬಿಟ್ಟಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲಿ ಎಂದು ಪರೋಕ್ಷವಾಗಿ ಶಾಪ ಹಾಕಿದ್ದಾರೆ.
1983ರಿಂದ ಬೇತಾಳವನ್ನು ಹಿಂದೆ ಕಟ್ಕೊಂಡು ಬಂದೆ. ಆ ಬೇತಾಳ ಚನ್ನಾಗಿ ಬೆಳೀತು, ಈಗ ನನಗೇ ತಲೆಗೆ ಹೊಡೀತಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾರ್ಮಿಕ ನುಡಿಗಳನ್ನಾಡಿದ್ದಾರೆ.

24 ವರ್ಷದಿಂದ ಶಾಸಕನಾಗಿದ್ರೂ ಸಚಿವ ಸ್ಥಾನ ಸಿಗಲಿಲ್ಲ. ಇದು ನನಗೆ ಮಾತ್ರವಲ್ಲ, ಕೊಡಗಿನ ಜನರಿಗೂ ಬೇಸರ ತರಿಸಿದೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ ಆಗಿಲ್ಲ. ಕೊಡಗು ಸೇರಿ 13 ಜಿಲ್ಲೆಗೆ ಸಚಿವ ಸ್ಥಾನ ಸಿಗಲಿಲ್ಲ. ಮೊದಲ ಸುತ್ತಿನಲ್ಲಿ ಸಚಿವನಾಗಿ ಮಾಡದಿರಲು ನನ್ನಲ್ಲೇನು ಕೊರತೆಯಿತ್ತು? ಎಂದು ಪಕ್ಷದ ವರಿಷ್ಠರನ್ನು ಅಪ್ಪಚ್ಚು ಪ್ರಶ್ನೆ ಮಾಡಿದ್ದಾರೆ.
ಕೋವಿಡ್ ಸೆಂಟರ್ಗೆ ಭೇಟಿ ನೀಡಿದ ಮೊದಲ ಶಾಸಕ ನಾನು. ಪಿಪಿಇ ಕಿಟ್ ಹಾಕಿ ಸೋಂಕಿತರಿಗೆ ಧೈರ್ಯ ಹೇಳಿದ್ದೇನೆ. ಆನಂತರ ಅನೇಕರು ಹೋಗಿದ್ದಾರೆ. ಜನತೆಯನ್ನು ನಾನು ಕೈಬಿಡಲ್ಲ, ಜನರ ಮನಸ್ಸಿನಲ್ಲಿ ನಾನಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಜಿಲ್ಲೆ ಕೊಡಗು ಮಾಡಿದ್ದೇವೆ. ಹಾಗಿದ್ದರೂ ನಮ್ಮನ್ನು ಕಡೆಗಣಿಸಿದ್ದಾರೆ. ಇದು ದೊಡ್ಡ ತಪ್ಪು. ಮಡಿಕೇರಿ ಜನರಿಗೆ ಮಾಡಿದ ಅನ್ಯಾಯ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
Madikeri Appachu Ranjan disappointed about cabinet expansion slams party leaders
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm