ಬ್ರೇಕಿಂಗ್ ನ್ಯೂಸ್
07-08-21 02:39 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 7: ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ. ಪಕ್ಷದವರೇ ನಮಗೆ ಮುಳ್ಳಾಗಿದ್ದಾರೆ. ನಾವು ಬೆಂಬಲಿಸಿ ಬೆಳೆಸಿದವರೇ ಮುಳ್ಳಾಗಿ ಪರಿಣಮಿಸಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದ ಮುಖಂಡರಿಂದಲೇ ನನಗೆ ತೊಂದರೆ ಆಯ್ತು. ಇಲ್ಲದಿದ್ರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ಪಟ್ಟಿಯಲ್ಲಿ ನನ್ನ ಹೆಸರಿತ್ತು, ಕೊನೇ ಕ್ಷಣದಲ್ಲಿ ಕೈಬಿಟ್ಟಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲಿ ಎಂದು ಪರೋಕ್ಷವಾಗಿ ಶಾಪ ಹಾಕಿದ್ದಾರೆ.
1983ರಿಂದ ಬೇತಾಳವನ್ನು ಹಿಂದೆ ಕಟ್ಕೊಂಡು ಬಂದೆ. ಆ ಬೇತಾಳ ಚನ್ನಾಗಿ ಬೆಳೀತು, ಈಗ ನನಗೇ ತಲೆಗೆ ಹೊಡೀತಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾರ್ಮಿಕ ನುಡಿಗಳನ್ನಾಡಿದ್ದಾರೆ.

24 ವರ್ಷದಿಂದ ಶಾಸಕನಾಗಿದ್ರೂ ಸಚಿವ ಸ್ಥಾನ ಸಿಗಲಿಲ್ಲ. ಇದು ನನಗೆ ಮಾತ್ರವಲ್ಲ, ಕೊಡಗಿನ ಜನರಿಗೂ ಬೇಸರ ತರಿಸಿದೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ ಆಗಿಲ್ಲ. ಕೊಡಗು ಸೇರಿ 13 ಜಿಲ್ಲೆಗೆ ಸಚಿವ ಸ್ಥಾನ ಸಿಗಲಿಲ್ಲ. ಮೊದಲ ಸುತ್ತಿನಲ್ಲಿ ಸಚಿವನಾಗಿ ಮಾಡದಿರಲು ನನ್ನಲ್ಲೇನು ಕೊರತೆಯಿತ್ತು? ಎಂದು ಪಕ್ಷದ ವರಿಷ್ಠರನ್ನು ಅಪ್ಪಚ್ಚು ಪ್ರಶ್ನೆ ಮಾಡಿದ್ದಾರೆ.
ಕೋವಿಡ್ ಸೆಂಟರ್ಗೆ ಭೇಟಿ ನೀಡಿದ ಮೊದಲ ಶಾಸಕ ನಾನು. ಪಿಪಿಇ ಕಿಟ್ ಹಾಕಿ ಸೋಂಕಿತರಿಗೆ ಧೈರ್ಯ ಹೇಳಿದ್ದೇನೆ. ಆನಂತರ ಅನೇಕರು ಹೋಗಿದ್ದಾರೆ. ಜನತೆಯನ್ನು ನಾನು ಕೈಬಿಡಲ್ಲ, ಜನರ ಮನಸ್ಸಿನಲ್ಲಿ ನಾನಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಜಿಲ್ಲೆ ಕೊಡಗು ಮಾಡಿದ್ದೇವೆ. ಹಾಗಿದ್ದರೂ ನಮ್ಮನ್ನು ಕಡೆಗಣಿಸಿದ್ದಾರೆ. ಇದು ದೊಡ್ಡ ತಪ್ಪು. ಮಡಿಕೇರಿ ಜನರಿಗೆ ಮಾಡಿದ ಅನ್ಯಾಯ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
Madikeri Appachu Ranjan disappointed about cabinet expansion slams party leaders
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm