ಬ್ರೇಕಿಂಗ್ ನ್ಯೂಸ್
07-08-21 03:51 pm Headline Karnataka News Network ಕರ್ನಾಟಕ
ನವದೆಹಲಿ, ಆಗಸ್ಟ್ 7: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳು ಹೊರ ರಾಜ್ಯದ ಪ್ರಯಾಣಿಕರ ಪ್ರವೇಶಕ್ಕೆ ಆರ್ ಟಿ ಪಿಸಿಆರ್ ನೆಗೆಟಿವ್ ಕಡ್ಡಾಯ ಮಾಡಿದೆ. ಇದೇ ವೇಳೆ, ಕೇಂದ್ರ ಸರಕಾರ ಕೊರೊನಾ ಲಸಿಕೆಯ ಎರಡೂ ಡೋಸನ್ನು ಪಡೆದಿರುವ ಮಂದಿಗೆ ಕೊರೊನಾ ನೆಗೆಟಿವ್ ಕಡ್ಡಾಯ ಮಾಡುವಂತಿಲ್ಲ. ಡೋಸ್ ಪಡೆದಿರುವುದನ್ನು ಖಾತ್ರಿಪಡಿಸಿ ಪ್ರವೇಶ ನೀಡಬಹುದು ಎಂದು ಹೇಳಿದೆ.
ಎರಡೂ ಲಸಿಕೆಯನ್ನು ಪಡೆದಿದ್ದರೂ, ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕೆಂದು ಕೆಲವು ರಾಜ್ಯಗಳು ಕಡ್ಡಾಯ ಪಡಿಸಿರುವುದನ್ನು ಕೇಂದ್ರ ಸರಕಾರ ಆಕ್ಷೇಪಿಸಿದ್ದು, ಪೂರ್ತಿ ಲಸಿಕೆ ಪಡೆದವರನ್ನು ಆ ರೀತಿ ಕಡ್ಡಾಯ ಮಾಡುವಂತಿಲ್ಲ ಎಂದು ಹೇಳಿದೆ. ಲಸಿಕೀಕರಣದ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯು ಕಳೆದ ಮೇ ತಿಂಗಳಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿತ್ತು. ಎರಡೂ ಲಸಿಕೆ ಪಡೆದವರ ಪ್ರಯಾಣಕ್ಕೆ ಆರ್ ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ಕೇಳುವ ಅಗತ್ಯವಿಲ್ಲ ಎಂದು ಹೇಳಿತ್ತು.

ಈ ವಿಚಾರದಲ್ಲಿ ಕೇಂದ್ರ ಆರೋಗ್ಯ ಇಲಾಖೆಯು ಆಯಾ ರಾಜ್ಯಗಳ ಜೊತೆ ಮಾತುಕತೆ ನಡೆಸಲಿದೆ. ಕೋವಿಡ್ ಲಸಿಕೆಯು ಮನುಷ್ಯನಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೆ, ರೋಗ ಬರದಂತೆ ತಡೆಯುತ್ತದೆ. ಈಗ ಕೊರೊನಾ ಹೆಚ್ಚುತ್ತಿರುವ ಮಧ್ಯೆ ಎಲ್ಲಿ ಅಗತ್ಯವಿದೆಯೋ ಅಲ್ಲಿ ಮಾತ್ರ ಆರ್ ಟಿಪಿಸಿಆರ್ ಟೆಸ್ಟ್ ಮಾಡಿದರೆ ಸಾಕು. ಇಲ್ಲದಿದ್ದರೆ ಯಾರು ಲಸಿಕೆಯನ್ನೂ ಪೂರ್ತಿಯಾಗಿ ತೆಗೆದುಕೊಂಡಿರುತ್ತಾರೋ, ಅಂಥವರು ಲಸಿಕೆ ಪಡೆದಿರುವುದನ್ನೇ ಪ್ರಯಾಣ ಸಂದರ್ಭದಲ್ಲಿ ತೋರಿಸಬೇಕು. ಕೋವಿಡ್ ನೆಗೆಟಿವ್ ಅಗತ್ಯವಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಎನ್.ಕೆ. ಅರೋರಾ ಹೇಳಿದ್ದಾರೆ.
ಕೇಂದ್ರ ಸರಕಾರದ ಮಾರ್ಗಸೂಚಿ ಈ ರೀತಿ ಹೇಳಿದ್ದರೂ, ಕರ್ನಾಟಕ, ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳು ಕೇರಳ ಮತ್ತು ಮಹಾರಾಷ್ಟ್ರದ ಜನರ ಪ್ರವೇಶಕ್ಕೆ ಆರ್ ಟಿಪಿಸಿಆರ್ ಟೆಸ್ಟ್ ವರದಿಯನ್ನು ಕಡ್ಡಾಯ ಮಾಡಿದೆ. ತಮಿಳುನಾಡು ಸರಕಾರವಂತೂ ಕೋವಿಡ್ ನೆಗೆಟಿವ್ ಮತ್ತು ಎರಡೂ ಡೋಸ್ ಲಸಿಕೆ ಪಡೆದಿರುವುದನ್ನು ಖಾತ್ರಿ ಪಡಿಸಿದರೆ ಮಾತ್ರ ಕೇರಳದವರಿಗೆ ಪ್ರವೇಶ ಎಂದಿದ್ದು ಭಾರೀ ಆಕ್ಷೇಪಕ್ಕೆ ಕಾರಣವಾಗಿದೆ.

ಛತ್ತೀಸ್ ಗಢ ಸರಕಾರ ವಿಮಾನದಲ್ಲಿ ಬರುವ ಎಲ್ಲ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯಗೊಳಿಸಿದ್ದರೆ, ಗೋವಾ ಸರಕಾರ ಕೇರಳದ ಪ್ರಯಾಣಿಕರಿಗೆ ಮಾತ್ರ ಆರ್ ಟಿಪಿಸಿಆರ್ ಟೆಸ್ಟ್ ವರದಿ ಕಡ್ಡಾಯ ಪಡಿಸಿದೆ. ಪಶ್ಚಿಮ ಬಂಗಾಳ ಸರಕಾರ ಆಗಸ್ಟ್ 8ರಿಂದ ಪುಣೆ, ಮುಂಬೈ, ಚೆನ್ನೈ ಹೀಗೆ ಕೆಲವು ನಗರಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಕಡ್ಡಾಯ ಮಾಡಿದೆ. ಕೇರಳದಲ್ಲಿ ಇಡೀ ದೇಶದಲ್ಲೇ ಅತ್ಯಧಿಕ ಕೊರೊನಾ ಸೋಂಕಿನ ಪ್ರಕರಣಗಳು ಇರುವುದರಿಂದ ಹೆಚ್ಚಿನ ರಾಜ್ಯಗಳು ಅಲ್ಲಿನ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರಾಜ್ಯಗಳ ನಿರ್ಬಂಧ ಕ್ರಮದ ಬಗ್ಗೆ ಮೂಗುತೂರಿಸಿದ್ದು, ಎರಡೂ ಡೋಸ್ ಪಡೆದಿರುವ ಮಂದಿಗೆ ಕೋವಿಡ್ ನಿರ್ಬಂಧ ವಿಧಿಸುವಂತಿಲ್ಲ ಎಂದು ಹೇಳಿದೆ. ಈ ಬಗ್ಗೆ ಸದ್ಯದಲ್ಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬರಲಿದೆ.
The central government has informed states that there is no need for mandatory RT-PCR reports to allow entry for those who have received both doses of covid-19 vaccines.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm