ಬ್ರೇಕಿಂಗ್ ನ್ಯೂಸ್
08-08-21 09:35 pm Headline Karnataka News Network ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ಒಂದು ಕಾಲದಲ್ಲಿ ನಮ್ಮ ಕಾರ್ಯಕರ್ತರ ಕೊಲೆ ಮಾಡುತ್ತಿದ್ದರು. ಆಗ ನಮಗೆ ಶಕ್ತಿ ಇರಲಿಲ್ಲ, ಶಕ್ತಿ ಇಲ್ಲ ಶಾಂತವಾಗಿರಿ ಎಂದು ನಾಯಕರು ಹೇಳುತ್ತಿದ್ದರು. ಈಗ ನಮ್ಮ ಮೈ ಯಾವನಾದರೂ ಮುಟ್ಟಲಿ ನೋಡೋಣ. ನಮ್ಮ ಸೈನಿಕ ಸತ್ತರೇ ಅಲ್ಲೇ ಹೆಣ ಬಿದ್ದಿರುತ್ತಿದ್ದ ಸಂದರ್ಭ ಆಗ ಇತ್ತು. ಈಗ ಇಲ್ಲ.. ಮೋದಿ ಬಂದ ಬಳಿಕ ಒಬ್ಬ ಸೈನಿಕ ಕೊಲೆ ಮಾಡಿದ್ರೆ ಒಂದಕ್ಕೆ ಹತ್ತು ತೆಗೆಯಿರಿ ಎಂದಿದ್ದಾರೆ. ಈಗ ನಮಗೆ ಶಕ್ತಿ ಇದೆ. ಇಡೀ ದೇಶದಲ್ಲಿ ಬೆಳೆದಿದ್ದೇವೆ, ನಾವಾಗಿ ನಾವು ಕೊಲೆ ಮಾಡಲ್ಲ, ಹಿಂಸೆ ಮಾಡಲ್ಲ. ನಮ್ಮ ಸುದ್ದಿಗೆ ಬಂದರೆ ಬ್ರಹ್ಮ ಬಂದರು ಬಿಡಲ್ಲ.
ಹೀಗೆಂದು ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಹಳೆಯ ಉಗ್ರ ಭಾಷಣವನ್ನು ಮತ್ತೆ ಬಿಗಿದಿದ್ದಾರೆ. ಬಿಜೆಪಿ ಶಿವಮೊಗ್ಗ ನಗರ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಈಶ್ವರಪ್ಪ ಭಾಷಣದಲ್ಲಿ ಪ್ರತಾಪ ತೋರಿದ್ದಾರೆ.
ಕೇರಳದಲ್ಲಿ ಆರ್ ಎಸ್ ಎಸ್ ಆರಂಭ ಮಾಡ್ತೀವಿ ಅಂತಾ ಯಾರಾದ್ರೂ ಕಾರ್ಯಕರ್ತ ಹೋದ್ರೆ, ಹಿಂದುತ್ವದ ಬಗ್ಗೆ ಮಾತನಾಡ್ತೀರಾ ಅಂತಾ ಕೊಲೆಗಳನ್ನು ಮಾಡ್ತಿದ್ದರು. ಅವರಿಗೆ ವಾಪಸ್ ಹೊಡೆಯಲು ಆಗ ನಮಗೆ ಶಕ್ತಿ ಇರಲಿಲ್ಲ. ಆ ಸಂದರ್ಭದಲ್ಲಿ ಒಬ್ಬನ ಕೊಲೆ ಸಹ ಆಗುತ್ತಿತ್ತು. ಆಗ ನಮ್ಮ ಸಂಘದ ಮುಖಂಡರು ಹೇಳುತ್ತಿದ್ದರು. ಅವರು ಹೊಡೆಯಲಿ, ಕೊಲೆ ಮಾಡಲಿ ಸುಮ್ಮನಿರಿ ಅಂತ. ಯಾಕಂದ್ರೆ ನಮ್ಮ ಬಳಿ ಅಷ್ಟೊಂದು ಶಕ್ತಿ ಇರಲಿಲ್ಲ. ಇಂದು ಲಕ್ಷ ಲಕ್ಷ ಜನ ಬಿಜೆಪಿ ಸೇರುತ್ತಿದ್ದಾರೆ. ಹಿಂದುತ್ವದ ಮೆರವಣಿಗೆ ಅಂದ್ರೆ ಕಲ್ಪನೆ ಮಾಡದಷ್ಟು ಜನ ಸೇರುತ್ತಿದ್ದಾರೆ. ಇಡೀ ಪ್ರಪಂಚದಲ್ಲಿ ಇಂದು ಬಿಜೆಪಿ ಸಾಕಷ್ಟು ಬೆಳೆದು ನಿಂತಿದೆ. ಯಾವುದೇ ಮೂಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೈ ಮುಟ್ಟಿದರೇ ಇವತ್ತು ಏನು ತೀರ್ಮಾನ. ಅಂದು ಬಿ ಕಾಮ್ ಅಟ್ ಎನಿಕಾಸ್ಟ್, ಇಂದು ಫೇಸ್ ವಿತ್ ದಿ ಸೇಮ್ ಸ್ಟಿಕ್.. ಯಾವುದರಲ್ಲಿ ಹೊಡೆಯುತ್ತಾರೆ ಅದರಲ್ಲೇ ಹೊಡೆದು ಒಂದಕ್ಕೆ ಎರಡು ತೆಗೆದು ಬಿಡಿ.
ಯಾರು ಹೇಳೋದು ಬೇಡ ಅಷ್ಟು ಶಕ್ತಿಶಾಲಿ ಆಗಿ ನಾವು ಬೆಳೆದು ಬಿಟ್ಟಿದ್ದೇವೆ. ಯಾಕಂದ್ರೆ ಇವತ್ತು ನಮ್ಮ ಸುದ್ದಿಗೆ ಯಾರೂ ಬರಲ್ಲ. ಕೇರಳದಲ್ಲಿ ಚುನಾವಣೆಯಲ್ಲಿ ಗೆಲ್ಲದೇ ಇರಬಹುದು. ಆದರೆ ಹಿಂದುತ್ವದ ದೊಡ್ಡ ಅಲೆ ಏಳುತ್ತಿದೆ. ಮುಸಲ್ಮಾನರು, ಕ್ರಿಶ್ಚಿಯನ್ನರಿಗೆ ರಾಷ್ಟ್ರೀಯ ವಿಚಾರ ಒಪ್ಪಿಸುವ ಶಕ್ತಿ ನಮಗೆ ಇನ್ನೂ ಬಂದಿಲ್ಲ. ಆದರೆ ನಮ್ಮ ಪರವಾಗಿ ಯಾರೂ ಊಹಿಸದಷ್ಟು ಜನ ಬೆಂಬಲ ನೀಡುತ್ತಿದ್ದಾರೆ. ತಮಿಳುನಾಡಿನಲ್ಲಿ ಈ ಬಾರಿ ದೊಡ್ಡ ದೊಡ್ಡ ನಟರು ಸೋತರು. ಅವರನ್ನು ಸೋಲಿಸಿದ್ದು ಬಿಜೆಪಿಯ ಹೆಣ್ಣು ಮಕ್ಕಳು ಎಂದು ಸೂಚ್ಯವಾಗಿ ಹೇಳಿದರು.
K S Eshwarappa makes controversial statements says let RSS touch BJP we will show our power
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm