ಬ್ರೇಕಿಂಗ್ ನ್ಯೂಸ್
08-08-21 09:35 pm Headline Karnataka News Network ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ಒಂದು ಕಾಲದಲ್ಲಿ ನಮ್ಮ ಕಾರ್ಯಕರ್ತರ ಕೊಲೆ ಮಾಡುತ್ತಿದ್ದರು. ಆಗ ನಮಗೆ ಶಕ್ತಿ ಇರಲಿಲ್ಲ, ಶಕ್ತಿ ಇಲ್ಲ ಶಾಂತವಾಗಿರಿ ಎಂದು ನಾಯಕರು ಹೇಳುತ್ತಿದ್ದರು. ಈಗ ನಮ್ಮ ಮೈ ಯಾವನಾದರೂ ಮುಟ್ಟಲಿ ನೋಡೋಣ. ನಮ್ಮ ಸೈನಿಕ ಸತ್ತರೇ ಅಲ್ಲೇ ಹೆಣ ಬಿದ್ದಿರುತ್ತಿದ್ದ ಸಂದರ್ಭ ಆಗ ಇತ್ತು. ಈಗ ಇಲ್ಲ.. ಮೋದಿ ಬಂದ ಬಳಿಕ ಒಬ್ಬ ಸೈನಿಕ ಕೊಲೆ ಮಾಡಿದ್ರೆ ಒಂದಕ್ಕೆ ಹತ್ತು ತೆಗೆಯಿರಿ ಎಂದಿದ್ದಾರೆ. ಈಗ ನಮಗೆ ಶಕ್ತಿ ಇದೆ. ಇಡೀ ದೇಶದಲ್ಲಿ ಬೆಳೆದಿದ್ದೇವೆ, ನಾವಾಗಿ ನಾವು ಕೊಲೆ ಮಾಡಲ್ಲ, ಹಿಂಸೆ ಮಾಡಲ್ಲ. ನಮ್ಮ ಸುದ್ದಿಗೆ ಬಂದರೆ ಬ್ರಹ್ಮ ಬಂದರು ಬಿಡಲ್ಲ.
ಹೀಗೆಂದು ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಹಳೆಯ ಉಗ್ರ ಭಾಷಣವನ್ನು ಮತ್ತೆ ಬಿಗಿದಿದ್ದಾರೆ. ಬಿಜೆಪಿ ಶಿವಮೊಗ್ಗ ನಗರ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಈಶ್ವರಪ್ಪ ಭಾಷಣದಲ್ಲಿ ಪ್ರತಾಪ ತೋರಿದ್ದಾರೆ.
ಕೇರಳದಲ್ಲಿ ಆರ್ ಎಸ್ ಎಸ್ ಆರಂಭ ಮಾಡ್ತೀವಿ ಅಂತಾ ಯಾರಾದ್ರೂ ಕಾರ್ಯಕರ್ತ ಹೋದ್ರೆ, ಹಿಂದುತ್ವದ ಬಗ್ಗೆ ಮಾತನಾಡ್ತೀರಾ ಅಂತಾ ಕೊಲೆಗಳನ್ನು ಮಾಡ್ತಿದ್ದರು. ಅವರಿಗೆ ವಾಪಸ್ ಹೊಡೆಯಲು ಆಗ ನಮಗೆ ಶಕ್ತಿ ಇರಲಿಲ್ಲ. ಆ ಸಂದರ್ಭದಲ್ಲಿ ಒಬ್ಬನ ಕೊಲೆ ಸಹ ಆಗುತ್ತಿತ್ತು. ಆಗ ನಮ್ಮ ಸಂಘದ ಮುಖಂಡರು ಹೇಳುತ್ತಿದ್ದರು. ಅವರು ಹೊಡೆಯಲಿ, ಕೊಲೆ ಮಾಡಲಿ ಸುಮ್ಮನಿರಿ ಅಂತ. ಯಾಕಂದ್ರೆ ನಮ್ಮ ಬಳಿ ಅಷ್ಟೊಂದು ಶಕ್ತಿ ಇರಲಿಲ್ಲ. ಇಂದು ಲಕ್ಷ ಲಕ್ಷ ಜನ ಬಿಜೆಪಿ ಸೇರುತ್ತಿದ್ದಾರೆ. ಹಿಂದುತ್ವದ ಮೆರವಣಿಗೆ ಅಂದ್ರೆ ಕಲ್ಪನೆ ಮಾಡದಷ್ಟು ಜನ ಸೇರುತ್ತಿದ್ದಾರೆ. ಇಡೀ ಪ್ರಪಂಚದಲ್ಲಿ ಇಂದು ಬಿಜೆಪಿ ಸಾಕಷ್ಟು ಬೆಳೆದು ನಿಂತಿದೆ. ಯಾವುದೇ ಮೂಲೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೈ ಮುಟ್ಟಿದರೇ ಇವತ್ತು ಏನು ತೀರ್ಮಾನ. ಅಂದು ಬಿ ಕಾಮ್ ಅಟ್ ಎನಿಕಾಸ್ಟ್, ಇಂದು ಫೇಸ್ ವಿತ್ ದಿ ಸೇಮ್ ಸ್ಟಿಕ್.. ಯಾವುದರಲ್ಲಿ ಹೊಡೆಯುತ್ತಾರೆ ಅದರಲ್ಲೇ ಹೊಡೆದು ಒಂದಕ್ಕೆ ಎರಡು ತೆಗೆದು ಬಿಡಿ.
ಯಾರು ಹೇಳೋದು ಬೇಡ ಅಷ್ಟು ಶಕ್ತಿಶಾಲಿ ಆಗಿ ನಾವು ಬೆಳೆದು ಬಿಟ್ಟಿದ್ದೇವೆ. ಯಾಕಂದ್ರೆ ಇವತ್ತು ನಮ್ಮ ಸುದ್ದಿಗೆ ಯಾರೂ ಬರಲ್ಲ. ಕೇರಳದಲ್ಲಿ ಚುನಾವಣೆಯಲ್ಲಿ ಗೆಲ್ಲದೇ ಇರಬಹುದು. ಆದರೆ ಹಿಂದುತ್ವದ ದೊಡ್ಡ ಅಲೆ ಏಳುತ್ತಿದೆ. ಮುಸಲ್ಮಾನರು, ಕ್ರಿಶ್ಚಿಯನ್ನರಿಗೆ ರಾಷ್ಟ್ರೀಯ ವಿಚಾರ ಒಪ್ಪಿಸುವ ಶಕ್ತಿ ನಮಗೆ ಇನ್ನೂ ಬಂದಿಲ್ಲ. ಆದರೆ ನಮ್ಮ ಪರವಾಗಿ ಯಾರೂ ಊಹಿಸದಷ್ಟು ಜನ ಬೆಂಬಲ ನೀಡುತ್ತಿದ್ದಾರೆ. ತಮಿಳುನಾಡಿನಲ್ಲಿ ಈ ಬಾರಿ ದೊಡ್ಡ ದೊಡ್ಡ ನಟರು ಸೋತರು. ಅವರನ್ನು ಸೋಲಿಸಿದ್ದು ಬಿಜೆಪಿಯ ಹೆಣ್ಣು ಮಕ್ಕಳು ಎಂದು ಸೂಚ್ಯವಾಗಿ ಹೇಳಿದರು.
K S Eshwarappa makes controversial statements says let RSS touch BJP we will show our power
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm