ಬ್ರೇಕಿಂಗ್ ನ್ಯೂಸ್
09-08-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು ಶೇ.99.09 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 157 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಕೊರೊನಾ ಆತಂಕದ ನಡುವೆ ಜುಲೈ 19 ಮತ್ತು 22ರಂದು ಎರಡೇ ದಿನದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಅಬ್ಜೆಕ್ಟಿವ್ ಆಗಿದ್ದ ಪ್ರಶ್ನೆ ಪತ್ರಿಕೆಯ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೀಮಿತವಾಗಿ ಮುಗಿಸಲಾಗಿತ್ತು. ಒಬ್ಬಳು ವಿದ್ಯಾರ್ಥಿನಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರಿಂದ ಆಕೆಯನ್ನು ಫೈಲ್ ಮಾಡಿದ್ದು ಬಿಟ್ಟರೆ ಉಳಿದೆಲ್ಲರೂ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,71,443 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಈ ಬಾರಿ ಅಂಕಗಳನ್ನು ಗ್ರೇಡ್ ಆಧಾರದಲ್ಲಿ ನೀಡಲಾಗಿದ್ದು, ಎ, ಎ ಪ್ಲಸ್, ಬಿ, ಸಿ ಹೀಗೆ ಅಂಕಗಳ ಆಧಾರದಲ್ಲಿ ಗ್ರೇಡ್ ಕೊಡಲಾಗಿದೆ. 2,50,317 ಮಂದಿ ಎ ಗ್ರೇಡ್ ನಲ್ಲಿ ಪಾಸ್ ಆಗಿದ್ದರೆ, ಬಿ ಗ್ರೇಡ್ ನಲ್ಲಿ 2,87,694 ಮಂದಿ ತೇರ್ಗಡೆಯಾಗಿದ್ದಾರೆ. ಇತರ ಶೇ. 9 ಮಂದಿ ವಿದ್ಯಾರ್ಥಿಗಳಿಗೆ ಸಿ ಗ್ರೇಡ್ ನೀಡಲಾಗಿದೆ.

265ರಿಂದ 625 ಅಂಕ ಪಡೆದವರಿಗೆ ಎ ಪ್ಲಸ್ ಗ್ರೇಡ್ ನೀಡಲಾಗಿದೆ. 437ರಿಂದ 499 ಅಂಕ ಪಡೆದವರಿಗೆ ಬಿ ಪ್ಲಸ್ ಗ್ರೇಡ್ ನೀಡಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC Results 2021 Announced on Monday August 9 says new Education Minister BC Nagesh
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm