ಬ್ರೇಕಿಂಗ್ ನ್ಯೂಸ್
09-08-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು ಶೇ.99.09 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 157 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಕೊರೊನಾ ಆತಂಕದ ನಡುವೆ ಜುಲೈ 19 ಮತ್ತು 22ರಂದು ಎರಡೇ ದಿನದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಅಬ್ಜೆಕ್ಟಿವ್ ಆಗಿದ್ದ ಪ್ರಶ್ನೆ ಪತ್ರಿಕೆಯ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೀಮಿತವಾಗಿ ಮುಗಿಸಲಾಗಿತ್ತು. ಒಬ್ಬಳು ವಿದ್ಯಾರ್ಥಿನಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರಿಂದ ಆಕೆಯನ್ನು ಫೈಲ್ ಮಾಡಿದ್ದು ಬಿಟ್ಟರೆ ಉಳಿದೆಲ್ಲರೂ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,71,443 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಈ ಬಾರಿ ಅಂಕಗಳನ್ನು ಗ್ರೇಡ್ ಆಧಾರದಲ್ಲಿ ನೀಡಲಾಗಿದ್ದು, ಎ, ಎ ಪ್ಲಸ್, ಬಿ, ಸಿ ಹೀಗೆ ಅಂಕಗಳ ಆಧಾರದಲ್ಲಿ ಗ್ರೇಡ್ ಕೊಡಲಾಗಿದೆ. 2,50,317 ಮಂದಿ ಎ ಗ್ರೇಡ್ ನಲ್ಲಿ ಪಾಸ್ ಆಗಿದ್ದರೆ, ಬಿ ಗ್ರೇಡ್ ನಲ್ಲಿ 2,87,694 ಮಂದಿ ತೇರ್ಗಡೆಯಾಗಿದ್ದಾರೆ. ಇತರ ಶೇ. 9 ಮಂದಿ ವಿದ್ಯಾರ್ಥಿಗಳಿಗೆ ಸಿ ಗ್ರೇಡ್ ನೀಡಲಾಗಿದೆ.

265ರಿಂದ 625 ಅಂಕ ಪಡೆದವರಿಗೆ ಎ ಪ್ಲಸ್ ಗ್ರೇಡ್ ನೀಡಲಾಗಿದೆ. 437ರಿಂದ 499 ಅಂಕ ಪಡೆದವರಿಗೆ ಬಿ ಪ್ಲಸ್ ಗ್ರೇಡ್ ನೀಡಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC Results 2021 Announced on Monday August 9 says new Education Minister BC Nagesh
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm