ಬ್ರೇಕಿಂಗ್ ನ್ಯೂಸ್
09-08-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು ಶೇ.99.09 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 157 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಕೊರೊನಾ ಆತಂಕದ ನಡುವೆ ಜುಲೈ 19 ಮತ್ತು 22ರಂದು ಎರಡೇ ದಿನದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಅಬ್ಜೆಕ್ಟಿವ್ ಆಗಿದ್ದ ಪ್ರಶ್ನೆ ಪತ್ರಿಕೆಯ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೀಮಿತವಾಗಿ ಮುಗಿಸಲಾಗಿತ್ತು. ಒಬ್ಬಳು ವಿದ್ಯಾರ್ಥಿನಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರಿಂದ ಆಕೆಯನ್ನು ಫೈಲ್ ಮಾಡಿದ್ದು ಬಿಟ್ಟರೆ ಉಳಿದೆಲ್ಲರೂ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,71,443 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಈ ಬಾರಿ ಅಂಕಗಳನ್ನು ಗ್ರೇಡ್ ಆಧಾರದಲ್ಲಿ ನೀಡಲಾಗಿದ್ದು, ಎ, ಎ ಪ್ಲಸ್, ಬಿ, ಸಿ ಹೀಗೆ ಅಂಕಗಳ ಆಧಾರದಲ್ಲಿ ಗ್ರೇಡ್ ಕೊಡಲಾಗಿದೆ. 2,50,317 ಮಂದಿ ಎ ಗ್ರೇಡ್ ನಲ್ಲಿ ಪಾಸ್ ಆಗಿದ್ದರೆ, ಬಿ ಗ್ರೇಡ್ ನಲ್ಲಿ 2,87,694 ಮಂದಿ ತೇರ್ಗಡೆಯಾಗಿದ್ದಾರೆ. ಇತರ ಶೇ. 9 ಮಂದಿ ವಿದ್ಯಾರ್ಥಿಗಳಿಗೆ ಸಿ ಗ್ರೇಡ್ ನೀಡಲಾಗಿದೆ.

265ರಿಂದ 625 ಅಂಕ ಪಡೆದವರಿಗೆ ಎ ಪ್ಲಸ್ ಗ್ರೇಡ್ ನೀಡಲಾಗಿದೆ. 437ರಿಂದ 499 ಅಂಕ ಪಡೆದವರಿಗೆ ಬಿ ಪ್ಲಸ್ ಗ್ರೇಡ್ ನೀಡಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC Results 2021 Announced on Monday August 9 says new Education Minister BC Nagesh
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm