ಬ್ರೇಕಿಂಗ್ ನ್ಯೂಸ್
09-08-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು ಶೇ.99.09 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 157 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಕೊರೊನಾ ಆತಂಕದ ನಡುವೆ ಜುಲೈ 19 ಮತ್ತು 22ರಂದು ಎರಡೇ ದಿನದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಅಬ್ಜೆಕ್ಟಿವ್ ಆಗಿದ್ದ ಪ್ರಶ್ನೆ ಪತ್ರಿಕೆಯ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೀಮಿತವಾಗಿ ಮುಗಿಸಲಾಗಿತ್ತು. ಒಬ್ಬಳು ವಿದ್ಯಾರ್ಥಿನಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರಿಂದ ಆಕೆಯನ್ನು ಫೈಲ್ ಮಾಡಿದ್ದು ಬಿಟ್ಟರೆ ಉಳಿದೆಲ್ಲರೂ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,71,443 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಈ ಬಾರಿ ಅಂಕಗಳನ್ನು ಗ್ರೇಡ್ ಆಧಾರದಲ್ಲಿ ನೀಡಲಾಗಿದ್ದು, ಎ, ಎ ಪ್ಲಸ್, ಬಿ, ಸಿ ಹೀಗೆ ಅಂಕಗಳ ಆಧಾರದಲ್ಲಿ ಗ್ರೇಡ್ ಕೊಡಲಾಗಿದೆ. 2,50,317 ಮಂದಿ ಎ ಗ್ರೇಡ್ ನಲ್ಲಿ ಪಾಸ್ ಆಗಿದ್ದರೆ, ಬಿ ಗ್ರೇಡ್ ನಲ್ಲಿ 2,87,694 ಮಂದಿ ತೇರ್ಗಡೆಯಾಗಿದ್ದಾರೆ. ಇತರ ಶೇ. 9 ಮಂದಿ ವಿದ್ಯಾರ್ಥಿಗಳಿಗೆ ಸಿ ಗ್ರೇಡ್ ನೀಡಲಾಗಿದೆ.

265ರಿಂದ 625 ಅಂಕ ಪಡೆದವರಿಗೆ ಎ ಪ್ಲಸ್ ಗ್ರೇಡ್ ನೀಡಲಾಗಿದೆ. 437ರಿಂದ 499 ಅಂಕ ಪಡೆದವರಿಗೆ ಬಿ ಪ್ಲಸ್ ಗ್ರೇಡ್ ನೀಡಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC Results 2021 Announced on Monday August 9 says new Education Minister BC Nagesh
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm