ಬ್ರೇಕಿಂಗ್ ನ್ಯೂಸ್
11-08-21 08:45 am Bengaluru Correspondent ಕರ್ನಾಟಕ
ವಿಜಯನಗರ, ಆಗಸ್ಟ್ 11: ತಮ್ಮ ಸಚಿವ ಸ್ಥಾನದ ಬಗ್ಗೆ ತೀವ್ರ ಮುನಿಸಿಕೊಂಡಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೇ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೊಸಪೇಟೆಯ ತಮ್ಮ ಕಚೇರಿಯನ್ನು ಮಂಗಳವಾರ ರಾತ್ರಿ ದಿಢೀರ್ ತೆರವು ಮಾಡಿದ್ದು ಅದರ ನಾಮಫಲಕ ತೆಗೆದು ಹಾಕಲಾಗಿದೆ.
ಅಲ್ಲದೆ, ಆ.11ರಿಂದ ಕಚೇರಿಯಲ್ಲಿ ಯಾವುದೇ ಸಾರ್ವಜನಿಕರ ಅಹವಾಲು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. ಕಚೇರಿ ಬಂದ್ ಕುರಿತು ಪ್ರತಿಕ್ರಿಯಿಸಿದ ಸಚಿವ ಆನಂದ್ ಸಿಂಗ್, ಈ ಬಗ್ಗೆ ನಾನೇನೂ ಪ್ರತಿಕ್ರಿಯಿಸಲಾರೆ. ಏನು ಹೇಳಬೇಕಿತ್ತೋ ಅದನ್ನು ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ ಎಂದಿದ್ದಾರೆ.


ಎರಡು ದಿನಗಳ ಹಿಂದೆ ಸಿಎಂ ಬೊಮ್ಮಾಯಿ ಅವರನ್ನು ಸಚಿವ ಸ್ಥಾನದ ವಿಚಾರದಲ್ಲಿ ಭೇಟಿಯಾಗಿದ್ದ ಆನಂದ ಸಿಂಗ್, ಬೇರೆ ಖಾತೆ ನೀಡಲು ಪಟ್ಟು ಹಿಡಿದಿದ್ದರು. ಅಲ್ಲದೆ ಎರಡು ದಿನಗಳ ಗಡುವನ್ನೂ ನೀಡಿದ್ದರು. ಇದೀಗ ಸಿಎಂ ಕಡೆಯಿಂದ ಸ್ಪಂದನೆ ಸಿಕ್ಕಿರದ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ. ಬೇಡಿಕೆ ಈಡೇರದಿದ್ದರೆ ಆ. 15ರಂದು ಧ್ವಜಾರೋಹಣವನ್ನೂ ಮಾಡದಿರಲು ಆನಂದ ಸಿಂಗ್ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆ ನೀಡಲಾಗಿದೆ. ಆದರೆ ಈ ಖಾತೆ ಬೇಡ ಎನ್ನುತ್ತಿರುವ ಆನಂದ್ ಸಿಂಗ್, ಖಾತೆಗಳ ಜವಾಬ್ದಾರಿ ವಹಿಸಿಕೊಳ್ಳದೆ ಮುನಿಸಿಕೊಂಡಿದ್ದಾರೆ.
14 ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಹೊಸಪೇಟೆಯ ರಾಣಿಪೇಟ್ ಎಂಬಲ್ಲಿದ್ದ ಶಾಸಕರ ಕಚೇರಿಯನ್ನು ತೆರವು ಮಾಡಿದ್ದು ಶಾಸಕ ಸ್ಥಾನಕ್ಕೇ ರಾಜಿನಾಮೆ ನೀಡುವ ಸೂಚನೆ ಎನ್ನಲಾಗಿದೆ. ಇತರ ಅತೃಪ್ತ ಶಾಸಕರ ಜೊತೆ ಸಂಪರ್ಕದಲ್ಲಿರುವ ಆನಂದ್ ಸಿಂಗ್, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೋ ಮತ್ತೆ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಾರೋ ಎನ್ನುವ ಕುತೂಹಲ ಎದ್ದಿದೆ. ಕಳೆದ ಬಾರಿ ಬಿಜೆಪಿ ಸರಕಾರ ಬರಲು ಆನಂದ್ ಸಿಂಗ್ ಕೂಡ ಕಾರಣರಾಗಿದ್ದರು. ಇದೇ ವಿಚಾರದಲ್ಲಿ ಯಡಿಯೂರಪ್ಪ ಸರಕಾರ ಇದ್ದಾಗ ಒತ್ತಡ ತಂತ್ರ ಅನುಸರಿಸಿ ಸಚಿವರಾಗಿದ್ದರು. ಆದರೆ ಈ ಬಾರಿ ಪ್ರಮುಖ ಖಾತೆಯ ಮೇಲೆ ಕಣ್ಣಿಟ್ಟಿದ್ದರು.
Anand Singh dissatisfaction with his portfolio Likely To Resign Closes MLA Office In Hospet. Just as Chief Minister Basavaraj Bommai allocated ministerial berths, B.S. Anand Singh, MLA for Vijayanagar, expressed his discontentment over the Tourism portfolio allocated to him.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm