ಬ್ರೇಕಿಂಗ್ ನ್ಯೂಸ್
11-08-21 08:45 am Bengaluru Correspondent ಕರ್ನಾಟಕ
ವಿಜಯನಗರ, ಆಗಸ್ಟ್ 11: ತಮ್ಮ ಸಚಿವ ಸ್ಥಾನದ ಬಗ್ಗೆ ತೀವ್ರ ಮುನಿಸಿಕೊಂಡಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೇ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೊಸಪೇಟೆಯ ತಮ್ಮ ಕಚೇರಿಯನ್ನು ಮಂಗಳವಾರ ರಾತ್ರಿ ದಿಢೀರ್ ತೆರವು ಮಾಡಿದ್ದು ಅದರ ನಾಮಫಲಕ ತೆಗೆದು ಹಾಕಲಾಗಿದೆ.
ಅಲ್ಲದೆ, ಆ.11ರಿಂದ ಕಚೇರಿಯಲ್ಲಿ ಯಾವುದೇ ಸಾರ್ವಜನಿಕರ ಅಹವಾಲು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. ಕಚೇರಿ ಬಂದ್ ಕುರಿತು ಪ್ರತಿಕ್ರಿಯಿಸಿದ ಸಚಿವ ಆನಂದ್ ಸಿಂಗ್, ಈ ಬಗ್ಗೆ ನಾನೇನೂ ಪ್ರತಿಕ್ರಿಯಿಸಲಾರೆ. ಏನು ಹೇಳಬೇಕಿತ್ತೋ ಅದನ್ನು ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ ಎಂದಿದ್ದಾರೆ.


ಎರಡು ದಿನಗಳ ಹಿಂದೆ ಸಿಎಂ ಬೊಮ್ಮಾಯಿ ಅವರನ್ನು ಸಚಿವ ಸ್ಥಾನದ ವಿಚಾರದಲ್ಲಿ ಭೇಟಿಯಾಗಿದ್ದ ಆನಂದ ಸಿಂಗ್, ಬೇರೆ ಖಾತೆ ನೀಡಲು ಪಟ್ಟು ಹಿಡಿದಿದ್ದರು. ಅಲ್ಲದೆ ಎರಡು ದಿನಗಳ ಗಡುವನ್ನೂ ನೀಡಿದ್ದರು. ಇದೀಗ ಸಿಎಂ ಕಡೆಯಿಂದ ಸ್ಪಂದನೆ ಸಿಕ್ಕಿರದ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ. ಬೇಡಿಕೆ ಈಡೇರದಿದ್ದರೆ ಆ. 15ರಂದು ಧ್ವಜಾರೋಹಣವನ್ನೂ ಮಾಡದಿರಲು ಆನಂದ ಸಿಂಗ್ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆ ನೀಡಲಾಗಿದೆ. ಆದರೆ ಈ ಖಾತೆ ಬೇಡ ಎನ್ನುತ್ತಿರುವ ಆನಂದ್ ಸಿಂಗ್, ಖಾತೆಗಳ ಜವಾಬ್ದಾರಿ ವಹಿಸಿಕೊಳ್ಳದೆ ಮುನಿಸಿಕೊಂಡಿದ್ದಾರೆ.
14 ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಹೊಸಪೇಟೆಯ ರಾಣಿಪೇಟ್ ಎಂಬಲ್ಲಿದ್ದ ಶಾಸಕರ ಕಚೇರಿಯನ್ನು ತೆರವು ಮಾಡಿದ್ದು ಶಾಸಕ ಸ್ಥಾನಕ್ಕೇ ರಾಜಿನಾಮೆ ನೀಡುವ ಸೂಚನೆ ಎನ್ನಲಾಗಿದೆ. ಇತರ ಅತೃಪ್ತ ಶಾಸಕರ ಜೊತೆ ಸಂಪರ್ಕದಲ್ಲಿರುವ ಆನಂದ್ ಸಿಂಗ್, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೋ ಮತ್ತೆ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಾರೋ ಎನ್ನುವ ಕುತೂಹಲ ಎದ್ದಿದೆ. ಕಳೆದ ಬಾರಿ ಬಿಜೆಪಿ ಸರಕಾರ ಬರಲು ಆನಂದ್ ಸಿಂಗ್ ಕೂಡ ಕಾರಣರಾಗಿದ್ದರು. ಇದೇ ವಿಚಾರದಲ್ಲಿ ಯಡಿಯೂರಪ್ಪ ಸರಕಾರ ಇದ್ದಾಗ ಒತ್ತಡ ತಂತ್ರ ಅನುಸರಿಸಿ ಸಚಿವರಾಗಿದ್ದರು. ಆದರೆ ಈ ಬಾರಿ ಪ್ರಮುಖ ಖಾತೆಯ ಮೇಲೆ ಕಣ್ಣಿಟ್ಟಿದ್ದರು.
Anand Singh dissatisfaction with his portfolio Likely To Resign Closes MLA Office In Hospet. Just as Chief Minister Basavaraj Bommai allocated ministerial berths, B.S. Anand Singh, MLA for Vijayanagar, expressed his discontentment over the Tourism portfolio allocated to him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm