ಬ್ರೇಕಿಂಗ್ ನ್ಯೂಸ್
12-08-21 05:37 pm Mangaluru Correspondent ಕರ್ನಾಟಕ
ರಾಮನಗರ, ಆಗಸ್ಟ್ 12: ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ತರಬೇತು ಪಡೆಯುತ್ತಿದ್ದ ಮಾಜಿ ಸೈನಿಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ಸೈನಿಕನ ಸಾವಿಗೆ ಅಲ್ಲಿನ ಅಧಿಕಾರಿಗಳೇ ಕಾರಣ ಎಂದು ಇತರೇ ಪೊಲೀಸ್ ಪೇದೆಗಳು ಪ್ರತಿಭಟನೆ ನಡೆಸಿದ್ದಾರೆ.
ಚನ್ನಪಟ್ಟಣದ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೂಲತಃ ಗದಗ ಜಿಲ್ಲೆ ನರಗುಂದ ತಾಲೂಕಿನವರಾದ ಎಲ್ಲಪ್ಪ, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ವಂದರಾಗುಪ್ಪೆ ಗ್ರಾಮದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು.
ಪೊಲೀಸ್ ತರಬೇತಿ ಶಾಲೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಕೊಡಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಖಂಡಿಸಿ ಉಳಿದ ಪೇದೆಗಳು ಪಿಟಿಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.
ಅಧಿಕಾರಿ ಅಮಾನತ್ತಿಗೆ ಮಾಜಿ ಸೈನಿಕರ ಆಗ್ರಹ
ಮಾಜಿ ಸೈನಿಕ ಎಲ್ಲಪ್ಪ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸೈನಿಕರ ಸಂಘ, ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿ ಆಮಾನತ್ತಿಗೆ ಆಗ್ರಹಿಸಿ ಪೊಲೀಸ್ ತರಬೇತಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ನೋವಿನಿಂದ ಎರಡು ಗಂಟೆ ನರಳಾಡಿದರೂ, ಅಧಿಕಾರಿಗಳು ಚಿಕಿತ್ಸೆ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಮಾಜಿ ಸೈನಿಕರ ಸಂಘ ಸದಸ್ಯರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
"ಪೊಲೀಸ್ ತರಬೇತಿ ಶಾಲೆಯಲ್ಲಿ ಸುಮಾರು 700 ಮಂದಿ ತರಬೇತಿ ಪಡೆಯುತ್ತಿದ್ದಾರೆ. ಆದರೆ ಶಾಲೆಯಲ್ಲಿ ಯಾವುದೇ ವೈದ್ಯರನ್ನು ನೇಮಕ ಮಾಡಿಕೊಂಡಿಲ್ಲ. ಅಲ್ಲಿ ಕೇವಲ ಒಬ್ಬರು ನರ್ಸ್ ಮಾತ್ರ ಇದ್ದಾರೆ. 700 ಜನ ವಿದ್ಯಾರ್ಥಿಗಳಿಗೆ ಒಬ್ಬರು ನರ್ಸ್ ಸಾಕೇ? ಎಂದು ಪ್ರಶ್ನಿಸಿದರು.
Ramnagara Probationary police constable dies suddenly during training.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm