ಬ್ರೇಕಿಂಗ್ ನ್ಯೂಸ್
12-08-21 05:37 pm Mangaluru Correspondent ಕರ್ನಾಟಕ
ರಾಮನಗರ, ಆಗಸ್ಟ್ 12: ಪೊಲೀಸ್ ತರಬೇತಿ ಅಕಾಡೆಮಿಯಲ್ಲಿ ತರಬೇತು ಪಡೆಯುತ್ತಿದ್ದ ಮಾಜಿ ಸೈನಿಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ಸೈನಿಕನ ಸಾವಿಗೆ ಅಲ್ಲಿನ ಅಧಿಕಾರಿಗಳೇ ಕಾರಣ ಎಂದು ಇತರೇ ಪೊಲೀಸ್ ಪೇದೆಗಳು ಪ್ರತಿಭಟನೆ ನಡೆಸಿದ್ದಾರೆ.
ಚನ್ನಪಟ್ಟಣದ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೂಲತಃ ಗದಗ ಜಿಲ್ಲೆ ನರಗುಂದ ತಾಲೂಕಿನವರಾದ ಎಲ್ಲಪ್ಪ, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ವಂದರಾಗುಪ್ಪೆ ಗ್ರಾಮದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು.
ಪೊಲೀಸ್ ತರಬೇತಿ ಶಾಲೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಕೊಡಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಘಟನೆಯನ್ನು ಖಂಡಿಸಿ ಉಳಿದ ಪೇದೆಗಳು ಪಿಟಿಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.
ಅಧಿಕಾರಿ ಅಮಾನತ್ತಿಗೆ ಮಾಜಿ ಸೈನಿಕರ ಆಗ್ರಹ
ಮಾಜಿ ಸೈನಿಕ ಎಲ್ಲಪ್ಪ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸೈನಿಕರ ಸಂಘ, ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿ ಆಮಾನತ್ತಿಗೆ ಆಗ್ರಹಿಸಿ ಪೊಲೀಸ್ ತರಬೇತಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಪೊಲೀಸ್ ಕಾನ್ಸ್ಟೆಬಲ್ ಎಲ್ಲಪ್ಪ ನೋವಿನಿಂದ ಎರಡು ಗಂಟೆ ನರಳಾಡಿದರೂ, ಅಧಿಕಾರಿಗಳು ಚಿಕಿತ್ಸೆ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಮಾಜಿ ಸೈನಿಕರ ಸಂಘ ಸದಸ್ಯರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
"ಪೊಲೀಸ್ ತರಬೇತಿ ಶಾಲೆಯಲ್ಲಿ ಸುಮಾರು 700 ಮಂದಿ ತರಬೇತಿ ಪಡೆಯುತ್ತಿದ್ದಾರೆ. ಆದರೆ ಶಾಲೆಯಲ್ಲಿ ಯಾವುದೇ ವೈದ್ಯರನ್ನು ನೇಮಕ ಮಾಡಿಕೊಂಡಿಲ್ಲ. ಅಲ್ಲಿ ಕೇವಲ ಒಬ್ಬರು ನರ್ಸ್ ಮಾತ್ರ ಇದ್ದಾರೆ. 700 ಜನ ವಿದ್ಯಾರ್ಥಿಗಳಿಗೆ ಒಬ್ಬರು ನರ್ಸ್ ಸಾಕೇ? ಎಂದು ಪ್ರಶ್ನಿಸಿದರು.
Ramnagara Probationary police constable dies suddenly during training.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm