ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.

ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm