ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.

ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm