ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.
ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm