ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.
ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm