ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.

ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm