ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.

ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm