ಬ್ರೇಕಿಂಗ್ ನ್ಯೂಸ್
06-09-20 10:24 am Dhruthi Anchan - Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06 : ಕನ್ನಡ ಚಲನಚಿತ್ರ ನಟ, ನಟಿಯರ ವಿರುದ್ಧ ಕೇಳಿಬರುತ್ತಿರುವ ಆರೋಪ ಸಂಬಂಧ ಬೆಂಗಳೂರಿನಲ್ಲಿರುವ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಶನಿವಾರ ಪದಾಧಿಕಾರಿಗಳ ತುರ್ತು ಸಭೆ ನಡೆದಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, 'ಡಾ.ರಾಜ್ಕುಮಾರ್ ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲರೂ ಸಾಗುತ್ತಿದ್ದೇವೆ. ಅವರ ಆದರ್ಶಗಳೇ ಇಂದಿಗೂ ನಮಗೆ ಮಾದರಿ. ಈಗ ಚಿತ್ರರಂಗಕ್ಕೆ ಧಕ್ಕೆ ತರುವಂತಹ ಘಟನೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಮಂಡಳಿಯಿಂದಲೂ ಕ್ರಮಕೈಗೊಳ್ಳಲಾಗುವುದು' ಎಂದು ವಿವರಿಸಿದರು.
ರಾಗಿಣಿ ಫಿಲ್ಮ್ ಚೇಂಬರ್ನ ಸದಸ್ಯತ್ವ ಪಡೆದಿಲ್ಲ. ಆದರೆ, ನಿರ್ಮಾಪಕರು ಆಕೆ ನಟಿಸುವ ಸಿನಿಮಾಗಳ ಮೇಲೆ ಕೋಟ್ಯಂತರ ರೂಪಾಯಿ ಬಂಡವಾಳ ಹೂಡುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಆಕೆಯ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ನಿರ್ಮಾಪಕ ಸಾ.ರಾ. ಗೋವಿಂದು ಸ್ಪಷ್ಟಪಡಿಸಿದರು.
'ಡ್ರಗ್ಸ್ ದಂಧೆ ಸಂಬಂಧ ಮುಕ್ತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಾರೋ ಒಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗವನ್ನು ದೂಷಿಸುವುದು ಸರಿಯಲ್ಲ' ಎಂದು ಹೇಳಿದರು.

ಇಷ್ಟೇ ಅಲ್ಲದೆ, ಕನ್ನಡ ಚಿತ್ರರಂಗದಲ್ಲಿ ನಟ, ನಟಿಯರು ಡ್ರಗ್ಸ್ ತೆಗದುಕೊಳ್ಳುತ್ತಾರೆ ಎಂಬ ಆರೋಪ ಮಾಡಿದ್ದ ಪ್ರಶಾಂತ್ ಸಂಬರ್ಗಿ ಈ ಕುರಿತು ಮಾಹಿತಿ ನೀಡುವ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಶಾಂತ್ ಸಂಬರ್ಗಿ ವಿರುದ್ಧ ಕಾನೂನು ಹೋರಾಟ ಮಾಡಲು ತೀರ್ಮಾನಿಸಿದ್ದು, ಆ ಆರೋಪ ಸಾಬೀತಾದರೆ ನಾನು ಸಿನಿಮಾ ಇಂಡಸ್ಟ್ರಿಯಿಂದ ಹೊರಹೋಗುತ್ತೇನೆ, ಆರೋಪ ಸಾಬೀತಾಗದಿದ್ದರೆ ಅವರು ರಾಜ್ಯದಿಂದ ಹೊರಹೋಗಬೇಕು' ಎಂದು ಸಾ.ರಾ.ಗೋವಿಂದು ಸವಾಲು ಹಾಕಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm