ಬ್ರೇಕಿಂಗ್ ನ್ಯೂಸ್
14-08-21 08:37 pm Bengaluru Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಹಾರ-ತುರಾಯಿ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಗೌರವ ರಕ್ಷೆ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಮೊದಲೇ ಕಂಗೆಟ್ಟು ಹೋಗಿರುವಾಗ ಅದರ ನಡುವೆ ಝೀರೋ ಟ್ರಾಫಿಕ್ ಮಾಡಿ ಸಂಚರಿಸುವ ರಾಜೋಪಚಾರಕ್ಕೆ ಇತಿಶ್ರೀ ಹಾಕಿದ್ದಾರೆ.
ಸಾಮಾನ್ಯವಾಗಿ ಸಿಎಂ ಆದಿಯಾಗಿ ಸಚಿವರು, ವಂದಿಮಾಗಧರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ಮಾಡಿ ಸಾರ್ವಜನಿಕರಿಗೆಲ್ಲ ಕಿರಿ ಕಿರಿ ಮಾಡುತ್ತಾರೆ. ಈ ರೀತಿ ಝೀರೋ ಟ್ರಾಫಿಕ್ ಮಾಡಿ ಸಾಮಾನ್ಯ ಜನರಿಗೆ ತೊಂದರೆ ಕೊಡುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ, ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಮಾಡುವುದೇ ಬೇಡ ಎಂದು ಹೇಳಿ ಮಾದರಿ ನಡೆ ಇಟ್ಟಿದ್ದಾರೆ.
ಸಂಚರಿಸುವಾಗ ಕೇವಲ ಸಿಗ್ನಲ್ ಫ್ರೀ ಮಾಡಿದರೆ ಸಾಕು, ಸಂಚಾರದ ವೇಳೆ ಆಂಬ್ಯುಲೆನ್ಸ್ ಗೆ ತೆರಳಲು ಅವಕಾಶ ಮಾಡಿಕೊಟ್ಟ ರೀತಿ ಸಿಗ್ನಲ್ ಫ್ರೀ ಮಾಡಿದರೆ ಸಾಕು ಎಂದು ಸೂಚಿಸಿದ್ದಾರೆ.
ಕೆಲದಿನಗಳ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡವೆಂದು ನಿರಾಕರಿಸಿದ್ದರು. ಇದಾಗುತ್ತಿದ್ದಂತೆ, ಮುಖ್ಯಮಂತ್ರಿಯೂ ಅದೇ ಹಾದಿ ಹಿಡಿದಿದ್ದಾರೆ.
Soon after Chief Minister Basavaraj Bommai refused the 'zero traffic' privilege since he considered himself a common man and wanted to avoid inconvenience to other motorists, the city police issued an order cancelling it from Saturday morning.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm