ಬ್ರೇಕಿಂಗ್ ನ್ಯೂಸ್
06-09-20 01:20 pm Bangalore Correspondant ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 06: ಉದ್ಯಾನದಲ್ಲಿ ಸ್ಪೋರ್ಟ್ಸ್ ಉಡುಗೆ ಧರಿಸಿ ಹುಲಾ ಹೂಪ್ ಪ್ರಾಕ್ಟಿಸ್ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಿಂದ ಟೀಕೆಗೆ ಗುರಿಯಾಗಿದ್ದ ನಟಿ ಸಂಯುಕ್ತಾ ಹೆಗ್ಡೆ ಪರವಾಗಿ ನಟ ನವರಸನಾಯಕ ಜಗ್ಗೇಶ್ ಮಾತನಾಡಿದ್ದಾರೆ.
ಈಗಷ್ಟೇ ನಟಿ ರಮ್ಯಾ ಸಹ ಸಂಯುಕ್ತಾ ಹೆಗ್ಡೆ ಟ್ವೀಟ್ ರೀಟ್ವಿಟ್ ಮಾಡಿಕೊಂಡು, ‘ಪೂರ್ತಿ ವಿಡಿಯೋವನ್ನು ನಾನು ನೋಡಿದ್ದೇನೆ. ಸಂಯುಕ್ತಾ ಮತ್ತು ಆಕೆಯ ಫ್ರೆಂಡ್ಸ್ ಅನ್ನು ನಡೆಸಿಕೊಂಡ ರೀತಿ ನೋಡಿ ನನಗೆ ಶಾಕ್ ಆಯಿತು. ಕಾರಣ ಏನೇ ಇರಬಹುದು ಆದರೆ, ನೈತಿಕ ಪೊಲೀಸ್ ಗಿರಿ, ಇನ್ನೊಬ್ಬರನ್ನು ನಿಂದಿಸುವ ಹಕ್ಕು ಯಾರಿಗೂ ಇಲ್ಲ ಎಂದಿದ್ದರು. ಇದೀಗ ಜಗ್ಗೇಶ್ ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗೆ ಜಾಲತಾಣಗಳಲ್ಲಿ ಮೊಬೈಲ್ ರೆಕಾರ್ಡ್ ಶುರು ಮಾಡಿ, ಕಾಲುಕೆರೆದು ಬರುವವರ ಸಂಖ್ಯೆ ಜಾಸ್ತಿ ಆಗುತ್ತಿದೆ. ಇಂದು ಬಾಪ್ ಕಟ್, ಪ್ಯಾಂಟ್ ಶರ್ಟಿನ ಹೆಂಗಸು ಅನ್ಯಳ ಬಟ್ಟೆ ಬಗ್ಗೆ ಬುದ್ಧಿ ಹೇಳುವಂತೆ ಕೈಮಾಡಿ ರೆಕಾರ್ಡ್ ಮಾಡುತ್ತಾಳೆ. ನಾವು ನೋಡಿ ಪರವಿರೋಧ ಚರ್ಚೆ ಮಾಡುತ್ತೇವೆ. ಸಮಾಜದ ಡೊಂಕು ತಿದ್ದುವ ಮೊದಲು ನಾವು ಸರಿ ಇರಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
ಅಷ್ಟಕ್ಕೂ ಆಗಿದ್ದೇನೆಂದರೆ, ಶುಕ್ರವಾರ ಸಂಜೆ ನಗರದ ಅಗರ ಕೆರೆ ಬಳಿ ಸಾರ್ವಜನಿಕರು ವಾಕಿಂಗ್ ಮಾಡುವ ಪಾರ್ಕ್ನಲ್ಲಿ ಸಂಯುಕ್ತಾ ಹೆಗ್ಡೆ ಮತ್ತವರ ಸ್ನೇಹಿತರು ಕ್ರೀಡಾ ಉಡುಗೆ ತೊಟ್ಟು ಹುಲಾ ಹೂಪ್ ಡಾನ್ಸ್ ಮಾಡಿದ್ದಾರೆ. ಹಾಗೆ ಬಟ್ಟೆ ತೊಟ್ಟು ನೃತ್ಯ ಮಾಡಿದ್ದಕ್ಕೆ ಸ್ಥಳೀಯರು ಗರಂ ಆಗಿ, ‘ಇದೇನು ಕ್ಯಾಬರೇನಾ? ಇಂಥ ಬಟ್ಟೆ ತೊಡಬೇಡಿ’ ಎಂದು ಸಂಯುಕ್ತಾ ಮತ್ತವರ ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಟಿಯರ ವಿರುದ್ಧ ಧಿಕ್ಕಾರ ಕೂಗಿ, ಉದ್ಯಾನದ ಗೇಟ್ ಲಾಕ್ ಮಾಡಿ, ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು.
ಇತ್ತ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದ ಸಂಯುಕ್ತಾ ಪರಿಸ್ಥಿತಿ ವಿವರಿಸಿದ್ದಾರೆ. ನಮ್ಮದೇನು ತಪ್ಪಿಲ್ಲ, ಕ್ರೀಡೆಯ ಉಡುಗೆ ತೊಟ್ಟು ಹುಲಾ ಪ್ರಾಕ್ಟಿಸ್ ಮಾಡಿದ್ದೇ ತಪ್ಪಾ ಎಂದು ಕಣ್ಣೀರಿಟ್ಟಿದ್ದರು. ಬಳಿಕ ಪೊಲೀಸರ ಸಮ್ಮುಖದಲ್ಲಿ ಪರಿಸ್ಥಿತಿ ಶಾಂತಗೊಳಿಸಲಾಯಿತು.
Join our WhatsApp group for latest news updates
ಕೋಪ ದುಃಖಕ್ಕೆಮೂಲ!
— ನವರಸನಾಯಕ ಜಗ್ಗೇಶ್ (@Jaggesh2) September 5, 2020
ಸಮಾಜದಡೊಂಕು ತಿದ್ದುವ ಮೊದಲು ನಾವು ಸರಿಯಿರಬೇಕು!
ಇತ್ತೀಚಗೆ ಜಾಲತಾಣಪ್ರಚಾರಕ್ಕೆ ಮೊಬೈಲ್ ರೆಕಾರ್ಡ ಚಾಲುಮಾಡಿ ಕಾಲುಕೆರದು ಬರುವವರ ಸಂಖ್ಯೆ ಜಾಸ್ತಿಆಗುತ್ತಿದೆ!ಇಂದು ಬಾಪ್ ಕಟ್ ಪ್ಯಾಂಟ್ ಶರ್ಟಿನ ಹೆಂಗಸು
ಅನ್ಯಳ ಬಟ್ಟೆಬಗ್ಗೆ ಬುದ್ದಿ ಹೇಳುವಂತೆ ಕೈಮಾಡಿ ರೆಕಾರ್ಡ ಮಾಡುತ್ತಾಳೆ!ನಾವು ನೋಡಿ ಪರವಿರೋಧ ಚರ್ಚೆಮಾಡುತ್ತೇವೆ😜 pic.twitter.com/Fz0Fbaqbyt
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm