ಬ್ರೇಕಿಂಗ್ ನ್ಯೂಸ್
19-08-21 04:10 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ 1 ರಿಂದ 8 ತರಗತಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಗಳನ್ನು ತೆರೆಯುವ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹ ಮಾಡುವಂತೆ ಬಿಇಓಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗಸ್ಟ್ ೨೩ರಿಂದ ರಾಜ್ಯದಲ್ಲಿ ೯ ರಿಂದ ೧೨ನೇ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಅಲ್ಲದೇ 1 ರಿಂದ 8 ತರಗತಿ ಶಾಲಾರಂಭ ಮಾಡುವ ಕುರಿತು ಸರಕಾರ ಚಿಂತನೆಯನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರ ಅಭಿಪ್ರಾಯ ಮುಖ್ಯವಾಗಿದೆ. ಹೀಗಾಗಿ ಎಲ್ಲಾ ಬಿಇಓಗಳ ಮೂಲಕ ಈ ಕಾರ್ಯವನ್ನು ಮಾಡಲಾಗುತ್ತದೆ. ಪೋಷಕರ ಅಭಿಪ್ರಾಯ ಸಂಗ್ರಹ ಮಾಡಿದ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.



ಶಿಕ್ಷಣ ಇಲಾಖೆ ಈಗಾಗಲೇ ಮಾಹಿತಿ ಕಲೆಹಾಕುವ ಕಾರ್ಯವನ್ನು ಮಾಡುತ್ತಿದೆ. ಶಾಲೆಗಳನ್ನು ತೆರೆಯುವ ಕುರಿತು ಅಗಸ್ಟ್ ೩೦ರ ಒಳಗೆ ಸಭೆಯನ್ನು ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಚರ್ಚೆಯನ್ನು ನಡೆಸಿದ ನಂತರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಇನ್ನೊಂದೆಡೆಯಲ್ಲಿ ಸರಕಾರ ಶಾಲೆಗಳನ್ನು ಆರಂಭಿಸುತ್ತಿದೆ. ಕೊರೊನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲೆಗಳು ಆರಂಭವಾಗುತ್ತಿಲ್ಲ. ಶಾಲಾರಂಭದ ಸಾಧಕ ಬಾಧಕ ಅರಿಯದೇ ಇದೀಗ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ಅಪಸ್ವರ ಕೇಳಿಬಂದಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm