ಬ್ರೇಕಿಂಗ್ ನ್ಯೂಸ್
20-08-21 10:55 am Shreeraksha, Boldsky ಕರ್ನಾಟಕ
ಶ್ರಾವಣ ಮಾಸದ ಅತೀ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ವ್ರತವೂ ಒಂದು. ವಿವಾಹಿತ ಮಹಿಳೆಯರು ತಮ್ಮ ಕುಟುಂಬಕ್ಕೆ ಒಳಿತಾಗಲಿ, ತಮ್ಮ ಕುಟುಂಬದಲ್ಲಿ ಸುಖ, ಶಾಂತಿ, ನೆಮ್ಮದಿ ಸಮೃದ್ಧತೆಯಿಂದ ಕೂಡಿರಲಿ ಎಂದು ಬೇಡಿಕೊಳ್ಳುವ ಹಬ್ಬವಾಗಿದೆ. ಶ್ರಾವಣ ಮಾಸದ ಮೂರನೇ ಶುಕ್ರವಾರ ಆಚರಣೆ ಮಾಡುವ ಈ ವರಮಹಾಲಕ್ಷ್ಮಿ ವ್ರತ ಈ ವರ್ಷವೂ ಆಗಸ್ಟ್ 20ರಂದು ಇದೆ. ಈ ವ್ರತದ ದಿನ ಕಷ್ಟಗಳನ್ನು ದೂರಮಾಡಲು ವರಮಹಾಲಕ್ಷ್ಮಿ ದೇವಿಯನ್ನು ತೃಪ್ತಿಪಡಿಸಲು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಉಪವಾಸ:
ವರಲಕ್ಷ್ಮಿ ದೇವಿ, ಸಂಪತ್ತು, ಸಮೃದ್ಧಿ ನೀಡುವ ತಾಯಿ. ಶ್ರಾವಣ ಮಾಸದ ಶುಕ್ರವಾರದಂದು ಈ ಹಬ್ಬ ಆಚರಿಸುವುದು ಸಂಪ್ರದಾಯವಾಗಿದೆ. ಈ ಹಿನ್ನಲೆಯಲ್ಲಿ ಮಹಿಳೆಯರು ತಮ್ಮ ಮನೆಗೆ ಶುಭಾವಾಗಲೆಂದು ಪ್ರತಿಜ್ಞೆ ಮಾಡಿ, ಉಪವಾಸ ಕೈಗೊಳ್ಳಬೇಕು. ಇದಕ್ಕಾಗಿ ಬೆಳಿಗ್ಗೆ ಸ್ನಾನ ಮಾಡಿ, ಮಡಿಯುಟ್ಟು, ಜಾ ಕೊಠಡಿಯನ್ನು ಸ್ವಚ್ಛಗೊಳಿಸಿ, ದೇವಿಗೆ ಪೂಜೆ ಮಾಡಿ, ದಿನವಿಡೀ ಉಪವಾಸ ಕೂರಬೇಕು. ಈ ದಿನ ಮಾಡಿದ ಉಪವಾಸದಿಂದ ನಿಮ್ಮ ಇಷ್ಟಾರ್ಥಗಳೆಲ್ಲವೂ ಈಡೇರಿಕೆಯಾಗುತ್ತದೆ ಎಂಬ ನಂಬಿಕೆಯಿದೆ, ಆದರೆ ಬಹಳ ಶ್ರದ್ಧೆಯಿಂದ ಮಾಡಿದರೆ ಮಾತ್ರ.

ತಾಯಿಯ ಅಲಂಕಾರ:
ವ್ರತಕ್ಕೆ ಕೂರುವ ಮೊದಲು ವರಲಕ್ಷ್ಮಿ ದೇವಿಯ ಮೂರ್ತಿಯನ್ನು ಅಲಂಕರಿಸಬೇಕು. ತದ ನಂತರ ಕಲಶವನ್ನು ಸ್ಥಾಪಿಸಬೇಕು. ಮೊದಲು ವಿಘ್ನವಿನಾಶಕ ಗಣೇಶನ ಪೂಜೆ ಮಾಡಬೇಕು, ತದನಂತರ ಕಳಶ ಪೂಜೆ ಮತ್ತು ಕಂಕಣ ಪೂಜೆಯನ್ನು ಮಾಡಬೇಕು. ಅದರ ನಂತರ ಅಷ್ಟೋತ್ತರ ಶತನಾಮಾವಳಿ ಓದಿ, ವರಲಕ್ಷ್ಮಿ ವ್ರತದ ಕಥೆ ಹೇಳಲು ಆರಂಭಿಸಬೇಕು.

ದೇವಿಯ ಪೂಜೆ:
ವರಲಕ್ಷ್ಮಿ ದೇವಿಯ ಕಥೆ ಮುಗಿದ ನಂತರ ಪೂಜೆ ಆರಂಭಿಸಬೇಕು. ಎಲ್ಲಾ ಅಷ್ಟಲಕ್ಷ್ಮಿಯನ್ನು ನೆನೆದು, ಅವರೆಲ್ಲರೂ ವರಲಕ್ಷ್ಮಿ ದೇವಿಯ ರೂಪವೆಂದು ಭಾವಿಸಿ, ಪೂಜಿಸಬೇಕು. ಮಹಿಳೆಯರು ಶ್ರದ್ಧೆ, ಭಕ್ತಿಯಿಂದ ಈ ರೀತಿ ಪೂಜಿಸುವುದರಿಂದ ತಮ್ಮ ಇಡೀ ಕುಟುಂಬಕ್ಕೆ ಆರೋಗ್ಯ, ಶಾಂತಿ, ಪ್ರೀತಿ, ಶಿಕ್ಷಣ, ಸಂಪತ್ತು, ಕೀರ್ತಿ, ಸಂತೋಷ ಇತ್ಯಾದಿ ಪ್ರಾಪ್ತಿಯಾಗುತ್ತದೆ.

ಬಾಗಿನ ನೀಡಿ:
ಪೂಜೆ ಮುಗಿದ ಮೇಲೆ ಮುತ್ತೈದೆಯರಿಗೆ ಕಾಣಿಕೆಗಳನ್ನು ಅಥವಾ ಬಾಗಿನ ನೀಡಬೇಕು. ಅವರ ಕೈಗಳಿಗೆ ಕಡಗಗಳನ್ನು ಧರಿಸಬೇಕು ಬಳೆ ಧರಿಸಿ, ಅಕ್ಷತೆ ಹಾಕಬೇಕು. ಅದರ ನಂತರ, ಎಲ್ಲಾ ಭಕ್ತರಿಗೆ ತಾಂಬೂಲ ಮತ್ತು ತೀರ್ಥ ಪ್ರಸಾದವನ್ನು ನೀಡಬೇಕು. ದೇವಿಗೆ ಅರ್ಪಿಸಿದ ನೈವೇದ್ಯವನ್ನು ಎಲ್ಲರಿಗೂ ಹಂಚಿ, ತಾವು ಸೇವಿಸಿ, ರಾತ್ರಿಯವರೆಗೂ ಉಪವಾಸ ಮುಂದುವರಿಸಬೇಕು. ಮರುದಿನ ಕಲಶ ತೆಗೆದು, ಆ ನೀರನ್ನು ಮನೆಯ ಮೇಲೆ ಚಿಮುಕಿಸಿದ ಮೇಲೆ ವ್ರತ ಮುಗಿಯುವುದು.

ಏನೇ ಮಾಡಿದರೂ ಭಕ್ತಿಯಿಂದ ಮಾಡಿ:
ದೇವಿಯನ್ನು ಬಹಳ ಭಕ್ತಿಯಿಂದ ಪೂಜಿಸಬೇಕು. ವರಲಕ್ಷ್ಮಿ ಸಂಪತ್ತಿನ ತಾಯಿಯಾಗಿರುವುದರಿಂದ ಈ ಎಲ್ಲಾ ಆಚರಣೆಗಳನ್ನು ಭಕ್ತಿಯಿಂದ ಮನಸ್ಸಿಟ್ಟು ಮಾಡಿದರೆ, ಎಲ್ಲಾ ಸೌಭಾಗ್ಯಗಳು ಬರುತ್ತವೆ. ಇದಲ್ಲದೆ, ಅನೇಕ ಜನರು ಅಷ್ಟೈಶ್ವರ್ಯಗಳು ಮತ್ತು ಆರೋಗ್ಯಭಾಗ್ಯಗಳು ಧರ್ಮಗ್ರಂಥವನ್ನು ಓದಿದಾಗ ಪಡೆಯಬಹುದು ಎಂದು ನಂಬುತ್ತಾರೆ. ಅದೇ ರೀತಿ ಕೆಲವರು ದೇವಿಗೆ ವಿವಿಧ ಅಲಂಕಾರಗಳನ್ನು ಮಾಡುವ ಮೂಲಕ ವಿಶೇಷ ಪೂಜೆಗಳನ್ನು ಮಾಡುತ್ತಾರೆ. ಆದರೆ, ಹಾಗೆ ಮಾಡಲಾಗದವರು, ಕೇವಲ ಕಲಶವಿಟ್ಟು ಪೂಜಿಸಿದರೂ, ಅದೇ ಫಲಿತಾಂಶಗಳು ಲಭ್ಯವಾಗುತ್ತದೆ ಆದರೆ ನಿಜವಾದ ಭಕ್ತಿಯರಬೇಕಷ್ಟೇ..

ವರಮಹಾಲಕ್ಷ್ಮಿ ವ್ರತದಂದು ಇದನ್ನು ಮಾಡಬೇಡಿ:
1. ವರಲಕ್ಷ್ಮಿ ವ್ರತದ ದಿನ, ಮನಸ್ಸಿನಲ್ಲಿ ಏನನ್ನಾದರೂ ಯೋಚಿಸುತ್ತಾ, ವಿಚಲಿತ ಮನಸ್ಸಿನಿಂದ ಪೂಜಿಸಬಾರದು, ನೀವು ಇಂತಹ ಮನಸ್ಥಿತಿಯಿಂದ ಪೂಜೆ ಮಾಡಿದರೆ, ಎಷ್ಟು ಅಲಂಕಾರ ಮಾಡಿದರೂ ಮತ್ತು ಎಷ್ಟು ಕಾಣಿಕೆಗಳನ್ನು ನೀಡಿದರೂ, ನಿಮ್ಮ ಆಸೆ ಈಡೇರುವುದಿಲ್ಲ. ಸಂಪೂರ್ಣ ಮನಸ್ಸು ದೇವಿಯ ಮೇಲಿರಬೇಕು.
2. ಇಂದು ಮಧ್ಯಾಹ್ನ ಮಲಗಲು ಹೋಗಬೇಡಿ.
3. ರಾತ್ರಿ ಕೂಡ ಅನ್ನವನ್ನು ತಿನ್ನಬೇಡಿ. ಯಾವುದೇ ಪಾನೀಯವನ್ನು ಮಾತ್ರ ಕುಡಿಯಿರಿ.
4. ಸಂಗಾತಿಯೊಂದಿಗೆ ಇಂದು ಯಾವುದೇ ದೈಹಿಕ ಸಂಪರ್ಕ ಬೇಡ.
(Kannada Copy of Boldsky Kannada)
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm