ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm