ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm