ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm