ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm