ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm