ಬ್ರೇಕಿಂಗ್ ನ್ಯೂಸ್
23-08-21 11:52 am Headline Karnataka News Network ಕರ್ನಾಟಕ
ಬಾಗಲಕೋಟೆ, ಆಗಸ್ಟ್ 23: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿರುವ ನಡುವೆ ತಾಲಿಬಾನ್ ಬೆಂಬಲಿಸಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಫೇಸ್ಬುಕ್ನಲ್ಲಿ ಐ ಲವ್ ತಾಲಿಬಾನ್ ಎಂದು ಪೋಸ್ಟ್ ಮಾಡಿದ್ದ ಆರೋಪಿ ಜಮಖಂಡಿಯ ಆಸೀಫ್ ಗಲಗಲಿ ಎಂಬಾತನನ್ನು ಬಂಧಿಸಲಾಗಿದೆ.

ಈತ ತನ್ನ ಫೇಸ್ಬುಕ್ ಪೋಸ್ಟ್ನಲ್ಲಿ ಐ ಲವ್ ತಾಲಿಬಾನಿ ಎಂದು ಬರೆದುಕೊಂಡಿದ್ದ. ಈ ಪೋಸ್ಟ್ ವೈರಲ್ ಆಗಿತ್ತು. ಈ ಬಗ್ಗೆ ಸ್ವಧರ್ಮಿಯರಿಂದಲೇ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ದೇಶದ್ರೋಹದ ಕೃತ್ಯ ಖಂಡಿಸಿ ಆತನನ್ನು ಬಂಧಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಈ ಪೋಸ್ಟ್ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪೋಸ್ಟ್ ವೈರಲ್ ಆದ ಬಳಿಕ ಆಸೀಫ್ ಗಲಗಲಿ ನಾಪತ್ತೆಯಾಗಿದ್ದ, ಇದೀಗ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಘಟನೆ ಸಂಬಂಧ ಜಮಖಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಅಸ್ಸಾಂನಲ್ಲಿ 14 ಮಂದಿಯ ಬಂಧನ;
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಂಡುಕೋರರು ಮರಳಿ ಅಧಿಕಾರವನ್ನು ಪಡೆದಿರುವುದನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಅಸ್ಸಾಂನ 11 ಜಿಲ್ಲೆಗಳಿಂದ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂ ರಾಜ್ಯದ 11 ಜಿಲ್ಲೆಗಳಿಂದ 14 ಮಂದಿಯನ್ನು ಬಂಧಿಸಿದ್ದು, ಇದರಲ್ಲಿ ತೇಝ್ ಪುರ್ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಯೂ ಸೇರಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ದೇಶವನ್ನು ವಶಪಡಿಸಿಕೊಂಡಿರುವುದಕ್ಕೆ ಕೆಲವರು ನೇರವಾಗಿ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಭಾರತವನ್ನು ಟೀಕಿಸಿದ್ದರು. ಅಲ್ಲದೇ ರಾಷ್ಟ್ರೀಯ ಮಾಧ್ಯಮಗಳು ತಾಲಿಬಾನ್ ಅನ್ನು ಬೆಂಬಲಿಸುವುದಿಲ್ಲ. ಇದರ ಪರಿಣಾಮ ಕೋಮು ಘರ್ಷಣೆ ನಡೆಯಲು ಕಾರಣವಾಗಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.
ಸಾಮಾಜಿಕ ಜಾಲತಾಣದ ಮೇಲೆ ಸೂಕ್ಷ್ಮ ನಿಗಾ ವಹಿಸಿದ್ದ ಅಸ್ಸಾಂ ಪೊಲೀಸ್ ಸೈಬರ್ ಸೆಲ್ ತಂಡ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದೆ. ತಾಲಿಬಾನ್ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ದೇಶದ ಭದ್ರತೆಗೆ ಧಕ್ಕೆ ತಂದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ವೈಯೊಲೆಟ್ ಬರುವಾ ತಿಳಿಸಿದ್ದಾರೆ.
I love Taliban post on facebook Bagalkot youth arrested by police. The arrest was made after massive opposition from Hindu organisations.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm