ಬ್ರೇಕಿಂಗ್ ನ್ಯೂಸ್
23-08-21 04:19 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 23 : ಸಿಎಂ ಅಂದರೆ ಕಾಮನ್ ಮ್ಯಾನ್. ಸಿನಿಮಾ ಥರ ಆರ್ಭಟಿಸಿದರೆ ಜನ ಕೇಳಬೇಕಲ್ಲಾ.. ಹೀಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸರಳ ಮಾತುಗಳಿಂದ ಜನಮನ ಸೂರೆಗೊಂಡ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೀ ಕನ್ನಡ ವಾಹಿನಿಯ ವೇದಿಕೆಯಲ್ಲಿ ತುಂಬ ಲವಲವಿಕೆಯಿಂದ ಮಕ್ಕಳ ಜೊತೆ ಮಾತನಾಡಿದರು. ಜೀ ಕನ್ನಡದ 15ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಅವರು ಅತಿಥಿಯಾಗಿ ಆಗಮಿಸಿದ್ದರು. ಆಗ ಅವರಿಗೆ ಮಕ್ಕಳು ಕೆಲವು ಪ್ರಶ್ನೆಗಳನ್ನು ಕೇಳಿದ್ದು ಅವುಗಳಿಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ ಎಲ್ಲರ ಮುಖದಲ್ಲೂ ನಗು ಮೂಡಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಪುಟ್ಟ ಹುಡುಗನೋರ್ವ “ನಾವು ತುಂಬ ಸಿನಿಮಾಗಳಲ್ಲಿ ನೋಡಿರುವ ಸಿಎಂ ಬೇರೆ ಬೇರೆ ಥರ ಇದ್ದರು. ನೀವೇನು ಸರ್ ಇಷ್ಟು ಸಿಂಪಲ್ ಆಗಿದ್ದೀರಲ್ಲಾ?” ಎಂದು ಪ್ರಶ್ನೆ ಹಾಕಿದನು. ಇದಕ್ಕೆ ನಗುತ್ತಲೇ ಉತ್ತರಿಸಿದ ಸಿಎಂ ಸಾಹೇಬರು, ಅದು ಸಿನಿಮಾ ಕಣೋ. ಸಿನಿಮಾದಲ್ಲಿ ಆರ್ಭಟ ಇರಲೇಬೇಕು. ಹಾಗಿದ್ದಾಗಲೇ ಸಿನಿಮಾ ನೋಡೋಕೆ ಜನ ಬರೋದು. ಆದರೆ ನಿಜ ಜೀವನದಲ್ಲಿ ನಾವು ಆರ್ಭಟ ಮಾಡಿದರೆ ಜನರು ಕೇಳಲ್ಲ. ಹಾಗಾಗಿ ನಾವು ಇಲ್ಲಿ ಸಿಂಪಲ್ ಆಗಿ ಇರಲೇಬೇಕು.
ನಿಮ್ಮ ಫೇವರಿಟ್ ಹೀರೋಯಿನ್ ಯಾರು ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದು ಬಹಳ ಕಷ್ಟದ ಪ್ರಶ್ನೆ. ಯಾಕೆಂದರೆ ಬಹಳ ಜನ ಇದ್ದಾರೆ. ಒಬ್ಬರ ಹೆಸರು ಹೇಳಿದರೆ ಇನ್ನೊಬ್ಬರಿಗೆ ಬೇಜಾರಾಗುತ್ತದೆ. ನನ್ನ ಆಲ್ಟೈಮ್ ಫೇವರಿಟ್ ಹೀರೋಯಿನ್ ಮಧುಬಾಲ. ಕನ್ನಡದಲ್ಲಿ ಹೇಳುವುದಾದರೆ, ನಮ್ಮ ಕಾಲದ ಟಾಪ್ 3 ಹೀರೋಯಿನ್ಗಳಾದ ಕಲ್ಪನಾ, ಜಯಂತಿ ಮತ್ತು ಭಾರತಿ ನನ್ನ ಫೇವರಿಟ್. ಡಾ. ರಾಜ್ಕುಮಾರ್ ಅವರು ನನ್ನ ಆಲ್ಟೈಮ್ ಫೇವರಿಟ್ ಹೀರೋ.
ವೇದಿಕೆಯಲ್ಲಿ ತಮ್ಮ ಅಮ್ಮ ಮಾಡಿಕೊಡುತ್ತಿದ್ದ ಬಿಸಿ ಬಿಸಿ ಜೋಳದ ರೊಟ್ಟಿ ನೆನಪಿಸಿಕೊಂಡರು. ಇದೇ ವೇಳೆ, ನಾನು ಸಿಎಂ ಅಂದರೆ ಕಾಮನ್ ಮ್ಯಾನ್ ಎಂದು ಬೊಮ್ಮಾಯಿ ಹೇಳಿದ್ದು ಎಲ್ಲರ ಗಮನಸೆಳೆಯಿತು.
ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಮಕ್ಕಳ ಜೊತೆ ತುಂಬ ಖುಷಿಯಿಂದ ಮಾತಾಡಿದರು. ಅವರ ಈ ಸರಳತೆಯ ವಿಡಿಯೋ ವೈರಲ್ ಆಗುತ್ತಿದೆ.
Video: Click
CM Basavaraj Bommai talks about his Favorite Heroines on Zee Kannada stage.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm