ಬ್ರೇಕಿಂಗ್ ನ್ಯೂಸ್
23-08-21 04:19 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 23 : ಸಿಎಂ ಅಂದರೆ ಕಾಮನ್ ಮ್ಯಾನ್. ಸಿನಿಮಾ ಥರ ಆರ್ಭಟಿಸಿದರೆ ಜನ ಕೇಳಬೇಕಲ್ಲಾ.. ಹೀಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸರಳ ಮಾತುಗಳಿಂದ ಜನಮನ ಸೂರೆಗೊಂಡ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೀ ಕನ್ನಡ ವಾಹಿನಿಯ ವೇದಿಕೆಯಲ್ಲಿ ತುಂಬ ಲವಲವಿಕೆಯಿಂದ ಮಕ್ಕಳ ಜೊತೆ ಮಾತನಾಡಿದರು. ಜೀ ಕನ್ನಡದ 15ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಅವರು ಅತಿಥಿಯಾಗಿ ಆಗಮಿಸಿದ್ದರು. ಆಗ ಅವರಿಗೆ ಮಕ್ಕಳು ಕೆಲವು ಪ್ರಶ್ನೆಗಳನ್ನು ಕೇಳಿದ್ದು ಅವುಗಳಿಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ ಎಲ್ಲರ ಮುಖದಲ್ಲೂ ನಗು ಮೂಡಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಪುಟ್ಟ ಹುಡುಗನೋರ್ವ “ನಾವು ತುಂಬ ಸಿನಿಮಾಗಳಲ್ಲಿ ನೋಡಿರುವ ಸಿಎಂ ಬೇರೆ ಬೇರೆ ಥರ ಇದ್ದರು. ನೀವೇನು ಸರ್ ಇಷ್ಟು ಸಿಂಪಲ್ ಆಗಿದ್ದೀರಲ್ಲಾ?” ಎಂದು ಪ್ರಶ್ನೆ ಹಾಕಿದನು. ಇದಕ್ಕೆ ನಗುತ್ತಲೇ ಉತ್ತರಿಸಿದ ಸಿಎಂ ಸಾಹೇಬರು, ಅದು ಸಿನಿಮಾ ಕಣೋ. ಸಿನಿಮಾದಲ್ಲಿ ಆರ್ಭಟ ಇರಲೇಬೇಕು. ಹಾಗಿದ್ದಾಗಲೇ ಸಿನಿಮಾ ನೋಡೋಕೆ ಜನ ಬರೋದು. ಆದರೆ ನಿಜ ಜೀವನದಲ್ಲಿ ನಾವು ಆರ್ಭಟ ಮಾಡಿದರೆ ಜನರು ಕೇಳಲ್ಲ. ಹಾಗಾಗಿ ನಾವು ಇಲ್ಲಿ ಸಿಂಪಲ್ ಆಗಿ ಇರಲೇಬೇಕು.

ನಿಮ್ಮ ಫೇವರಿಟ್ ಹೀರೋಯಿನ್ ಯಾರು ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದು ಬಹಳ ಕಷ್ಟದ ಪ್ರಶ್ನೆ. ಯಾಕೆಂದರೆ ಬಹಳ ಜನ ಇದ್ದಾರೆ. ಒಬ್ಬರ ಹೆಸರು ಹೇಳಿದರೆ ಇನ್ನೊಬ್ಬರಿಗೆ ಬೇಜಾರಾಗುತ್ತದೆ. ನನ್ನ ಆಲ್ಟೈಮ್ ಫೇವರಿಟ್ ಹೀರೋಯಿನ್ ಮಧುಬಾಲ. ಕನ್ನಡದಲ್ಲಿ ಹೇಳುವುದಾದರೆ, ನಮ್ಮ ಕಾಲದ ಟಾಪ್ 3 ಹೀರೋಯಿನ್ಗಳಾದ ಕಲ್ಪನಾ, ಜಯಂತಿ ಮತ್ತು ಭಾರತಿ ನನ್ನ ಫೇವರಿಟ್. ಡಾ. ರಾಜ್ಕುಮಾರ್ ಅವರು ನನ್ನ ಆಲ್ಟೈಮ್ ಫೇವರಿಟ್ ಹೀರೋ.
ವೇದಿಕೆಯಲ್ಲಿ ತಮ್ಮ ಅಮ್ಮ ಮಾಡಿಕೊಡುತ್ತಿದ್ದ ಬಿಸಿ ಬಿಸಿ ಜೋಳದ ರೊಟ್ಟಿ ನೆನಪಿಸಿಕೊಂಡರು. ಇದೇ ವೇಳೆ, ನಾನು ಸಿಎಂ ಅಂದರೆ ಕಾಮನ್ ಮ್ಯಾನ್ ಎಂದು ಬೊಮ್ಮಾಯಿ ಹೇಳಿದ್ದು ಎಲ್ಲರ ಗಮನಸೆಳೆಯಿತು.
ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಮಕ್ಕಳ ಜೊತೆ ತುಂಬ ಖುಷಿಯಿಂದ ಮಾತಾಡಿದರು. ಅವರ ಈ ಸರಳತೆಯ ವಿಡಿಯೋ ವೈರಲ್ ಆಗುತ್ತಿದೆ.
Video: Click
CM Basavaraj Bommai talks about his Favorite Heroines on Zee Kannada stage.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm