ಬ್ರೇಕಿಂಗ್ ನ್ಯೂಸ್
23-08-21 04:19 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 23 : ಸಿಎಂ ಅಂದರೆ ಕಾಮನ್ ಮ್ಯಾನ್. ಸಿನಿಮಾ ಥರ ಆರ್ಭಟಿಸಿದರೆ ಜನ ಕೇಳಬೇಕಲ್ಲಾ.. ಹೀಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸರಳ ಮಾತುಗಳಿಂದ ಜನಮನ ಸೂರೆಗೊಂಡ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೀ ಕನ್ನಡ ವಾಹಿನಿಯ ವೇದಿಕೆಯಲ್ಲಿ ತುಂಬ ಲವಲವಿಕೆಯಿಂದ ಮಕ್ಕಳ ಜೊತೆ ಮಾತನಾಡಿದರು. ಜೀ ಕನ್ನಡದ 15ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಅವರು ಅತಿಥಿಯಾಗಿ ಆಗಮಿಸಿದ್ದರು. ಆಗ ಅವರಿಗೆ ಮಕ್ಕಳು ಕೆಲವು ಪ್ರಶ್ನೆಗಳನ್ನು ಕೇಳಿದ್ದು ಅವುಗಳಿಗೆ ಉತ್ತರಿಸಿದ ಬಸವರಾಜ ಬೊಮ್ಮಾಯಿ ಎಲ್ಲರ ಮುಖದಲ್ಲೂ ನಗು ಮೂಡಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಪುಟ್ಟ ಹುಡುಗನೋರ್ವ “ನಾವು ತುಂಬ ಸಿನಿಮಾಗಳಲ್ಲಿ ನೋಡಿರುವ ಸಿಎಂ ಬೇರೆ ಬೇರೆ ಥರ ಇದ್ದರು. ನೀವೇನು ಸರ್ ಇಷ್ಟು ಸಿಂಪಲ್ ಆಗಿದ್ದೀರಲ್ಲಾ?” ಎಂದು ಪ್ರಶ್ನೆ ಹಾಕಿದನು. ಇದಕ್ಕೆ ನಗುತ್ತಲೇ ಉತ್ತರಿಸಿದ ಸಿಎಂ ಸಾಹೇಬರು, ಅದು ಸಿನಿಮಾ ಕಣೋ. ಸಿನಿಮಾದಲ್ಲಿ ಆರ್ಭಟ ಇರಲೇಬೇಕು. ಹಾಗಿದ್ದಾಗಲೇ ಸಿನಿಮಾ ನೋಡೋಕೆ ಜನ ಬರೋದು. ಆದರೆ ನಿಜ ಜೀವನದಲ್ಲಿ ನಾವು ಆರ್ಭಟ ಮಾಡಿದರೆ ಜನರು ಕೇಳಲ್ಲ. ಹಾಗಾಗಿ ನಾವು ಇಲ್ಲಿ ಸಿಂಪಲ್ ಆಗಿ ಇರಲೇಬೇಕು.
ನಿಮ್ಮ ಫೇವರಿಟ್ ಹೀರೋಯಿನ್ ಯಾರು ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದು ಬಹಳ ಕಷ್ಟದ ಪ್ರಶ್ನೆ. ಯಾಕೆಂದರೆ ಬಹಳ ಜನ ಇದ್ದಾರೆ. ಒಬ್ಬರ ಹೆಸರು ಹೇಳಿದರೆ ಇನ್ನೊಬ್ಬರಿಗೆ ಬೇಜಾರಾಗುತ್ತದೆ. ನನ್ನ ಆಲ್ಟೈಮ್ ಫೇವರಿಟ್ ಹೀರೋಯಿನ್ ಮಧುಬಾಲ. ಕನ್ನಡದಲ್ಲಿ ಹೇಳುವುದಾದರೆ, ನಮ್ಮ ಕಾಲದ ಟಾಪ್ 3 ಹೀರೋಯಿನ್ಗಳಾದ ಕಲ್ಪನಾ, ಜಯಂತಿ ಮತ್ತು ಭಾರತಿ ನನ್ನ ಫೇವರಿಟ್. ಡಾ. ರಾಜ್ಕುಮಾರ್ ಅವರು ನನ್ನ ಆಲ್ಟೈಮ್ ಫೇವರಿಟ್ ಹೀರೋ.
ವೇದಿಕೆಯಲ್ಲಿ ತಮ್ಮ ಅಮ್ಮ ಮಾಡಿಕೊಡುತ್ತಿದ್ದ ಬಿಸಿ ಬಿಸಿ ಜೋಳದ ರೊಟ್ಟಿ ನೆನಪಿಸಿಕೊಂಡರು. ಇದೇ ವೇಳೆ, ನಾನು ಸಿಎಂ ಅಂದರೆ ಕಾಮನ್ ಮ್ಯಾನ್ ಎಂದು ಬೊಮ್ಮಾಯಿ ಹೇಳಿದ್ದು ಎಲ್ಲರ ಗಮನಸೆಳೆಯಿತು.
ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಮಕ್ಕಳ ಜೊತೆ ತುಂಬ ಖುಷಿಯಿಂದ ಮಾತಾಡಿದರು. ಅವರ ಈ ಸರಳತೆಯ ವಿಡಿಯೋ ವೈರಲ್ ಆಗುತ್ತಿದೆ.
Video: Click
CM Basavaraj Bommai talks about his Favorite Heroines on Zee Kannada stage.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm