ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.

ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.

ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm