ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.

ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.

ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm