ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.

ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.

ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm