ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.

ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.

ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm