ಬ್ರೇಕಿಂಗ್ ನ್ಯೂಸ್
26-08-21 03:57 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ರಾಜ್ಯ ಸರಕಾರ ಕ್ಯಾನ್ಸರ್ ಪೀಡಿತ ಮುಸ್ಲಿಮ್ ಮಹಿಳೆಯರಿಗೆ ಒಂದು ಲಕ್ಷ ರೂಪಾಯಿ ಸಹಾಯಧನ ನೀಡುತ್ತಿರುವುದನ್ನು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪತ್ತೆ ಮಾಡಿದ್ದು, ಈ ಬಗ್ಗೆ ಆಕ್ಷೇಪ ತೆಗೆದಿದ್ದಾರೆ. ಕ್ಯಾನ್ಸರ್ ರೋಗ ಯಾವುದೇ ಜಾತಿ ನೋಡಿ ಬರುವುದಿಲ್ಲ. ಎಲ್ಲ ಜಾತಿ, ಜನಾಂಗದವರಿಗೂ ಈ ರೀತಿಯ ರೋಗ ಬರುತ್ತದೆ. ಹಾಗಾಗಿ ಈ ಸಹಾಯಧನವನ್ನು ಕೂಡಲೇ ಎಲ್ಲ ಜಾತಿ, ವರ್ಗದವರಿಗೂ ಸಿಗುವಂತೆ ಮರು ಆದೇಶ ನೀಡುವಂತೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರಿಗೆ ಯತ್ನಾಳ್ ಬರೆದಿದ್ದು, ಯಾವುದೇ ಸರಕಾರ ಈ ರೀತಿಯ ತಾರತಮ್ಯ ಮತ್ತು ಮುಸ್ಲಿಂ ತುಷ್ಟೀಕರಣ ಮಾಡಬಾರದು. ಬಿಜೆಪಿ ಆಡಳಿತದಲ್ಲಿದ್ದೂ ಈ ರೀತಿಯ ತಾರತಮ್ಯ ಮಾಡುವುದನ್ನು ಸಹಿಸುವುದಿಲ್ಲ. ಈ ಕುರಿತ ಆದೇಶವನ್ನು ಕೂಡಲೇ ಹಿಂಪಡೆದು, ಬಿಪಿಎಲ್ ವರ್ಗದ ಎಲ್ಲರಿಗೂ ಸೌಲಭ್ಯ ದೊರಕಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರ ತನ್ನ ನಿರ್ಧಾರವನ್ನು ಬದಲಿಸಿ, ಹೊಸ ಆದೇಶ ನೀಡದಿದ್ದಲ್ಲಿ ಬಿಜೆಪಿ ಸರಕಾರಕ್ಕೂ ಇತರೇ ಸರಕಾರಕ್ಕೂ ವ್ಯತ್ಯಾಸವಿಲ್ಲ ಎಂದು ಭಾವಿಸಬೇಕಾಗುತ್ತದೆ. ಸರಕಾರ ಎಲ್ಲ ಬಡ ಜನರಿಗಾಗಿ ಇರಬೇಕು. ಯಾವುದೋ ಜಾತಿ, ಜನಾಂಗದವರ ಪರ ಇರಬಾರದು. ಎಲ್ಲ ವರ್ಗದ ಕ್ಯಾನ್ಸರ್ ಪೀಡಿತರಿಗೆ ಸರಕಾರದ ಸಹಾಯಧನ ಲಭಿಸಬೇಕು ಎಂದು ಶಾಸಕ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಸರಕಾರವನ್ನು ಒತ್ತಾಯಿಸಿದ್ದಾರೆ.
BJP legislator representing the city constituency here, Basanagouda Patil Yatnal, urged the government to withdraw the scheme meant for extending financial assistance of up to one lac rupees to Muslim women suffering from major health complications, and introduce a fresh scheme by covering people from all the castes, communities and religions.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm