ಬ್ರೇಕಿಂಗ್ ನ್ಯೂಸ್
28-08-21 01:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಆಗಸ್ಟ್ 28: ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ.. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ಹೀಗೆಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ಮದನಪಲ್ಲಿ- ಹೊಸಕೋಟೆ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ತನ್ನ ಕ್ಷೇತ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಚಿಂತಾಮಣಿ ನಗರ ಠಾಣೆಯ ಪಿಎಸ್ಐ ಮುಕ್ತಿಯಾರ್ ತಮ್ಮ ಸಿಬ್ಬಂದಿಯೊಂದಿಗೆ ಚಿಂತಾಮಣಿ ತಾಲೂಕಿನ ಮಾಡಿಕೇರಿ ಕ್ರಾಸ್ನಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದನ್ನು ಕಂಡು ತನ್ನ ವಾಹನ ನಿಲ್ಲಿಸಿ ಬಂದು ದಂಡ ವಸೂಲಿ ಮಾಡುತ್ತಿದ್ದ ಪೋಲಿಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
'ಮೊನ್ನೆಯೆಲ್ಲಾ ಗೃಹ ಮಂತ್ರಿಗಳು ಆದೇಶ ಮಾಡಿದ್ದಾರೆ. ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ದಂಡ ಹಾಕಬೇಡಿ ಎಂದು. ನೀವೇಕೆ ಹಾಕುತ್ತೀರಾ. ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು. ಏನು ಡ್ಯಾಕ್ಯುಮೆಂಟ್ ಚೆಕ್ ಮಾಡ್ತೀರ ನೀವು ? ನಾಚಿಕೆಯಾಗ ಬೇಕು ನಿಮಗೆ, ಮಿನಿಸ್ಟರ್ ಮೊನ್ನೆ ತಾನೆ ಬಾಯಿಬಡ್ಕೊಂಡು ಹೇಳ್ತಾನೆ, ನೀವು ಏನು ಮಾಡುವುದು, ನಿಮ್ಮ ಮಕ್ಕಳಿಗೆ ಹೇಗೆ ಒಳ್ಳೆಯದು ಆಗೋದು 'ಅಂತ ಪೊಲೀಸ್ ಅಧಿಕಾರಿಗಳಿಗೆ ಮೈಚಳಿ ಬಿಡಿಸಿದರು.
ಪೊಲೀಸರನ್ನು ಹೀಗೆ ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ರಮೇಶ್ ಕುಮಾರ್ ಕ್ರಮಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
Video:
Chikkaballapur Former speaker Ramesh Kumar slams Traffic Police for collecting fines in road. Says how will your kids be good if you do all this. Video of this does viral on social media.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
17-08-25 04:13 pm
Mangalore Correspondent
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm