ಬ್ರೇಕಿಂಗ್ ನ್ಯೂಸ್
28-08-21 05:03 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 28 : ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕಾರಣಕ್ಕೆ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟ ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ರದ್ದು ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿದ ಸಚಿವರು, ಸುತ್ತೋಲೆ ವಾಪಸ್ ಪಡೆಯುವಂತೆ ಕುಲಪತಿ ಪ್ರೊ. ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.

ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಬಹಳ ವಿಶಾಲವಾಗಿರುತ್ತವೆ ನಿಜ. ಹಾಗೆಂದು, ವಿದ್ಯಾರ್ಥಿನಿಯರು ಓಡಾಡದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತ ಕ್ಯಾಂಪಸ್ ರೂಪಿಸಬೇಕು ಎಂದು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದರು.

ಅತ್ಯಾಚಾರ ಘಟನೆ ಖಂಡನೀಯ. ಈ ಘಟನೆಯ ಕಾರಣಕ್ಕೆ ಹೆಣ್ಣು ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳಲ್ಲಿ ಹೆಚ್ಚು ನಿಗಾ ವಹಿಸಬೇಕು. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ವ್ಯಾಪಕ ನಿಗಾ ಇರಿಸುವುದರ ಜತೆಗೆ, ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಈ ಬಗ್ಗೆ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.
In an outrageous move, the University of Mysore has imposed restrictions on the movement of female students on campus after 6.30 pm from August 27 over the “safety of girl students”. This comes days after an MBA student was allegedly gangraped in Mysuru. No restrictions have been placed on male students.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm