ಬ್ರೇಕಿಂಗ್ ನ್ಯೂಸ್
28-08-21 05:03 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 28 : ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕಾರಣಕ್ಕೆ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟ ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ರದ್ದು ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿದ ಸಚಿವರು, ಸುತ್ತೋಲೆ ವಾಪಸ್ ಪಡೆಯುವಂತೆ ಕುಲಪತಿ ಪ್ರೊ. ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದರು.

ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳು ಬಹಳ ವಿಶಾಲವಾಗಿರುತ್ತವೆ ನಿಜ. ಹಾಗೆಂದು, ವಿದ್ಯಾರ್ಥಿನಿಯರು ಓಡಾಡದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತ ಕ್ಯಾಂಪಸ್ ರೂಪಿಸಬೇಕು ಎಂದು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸೂಚಿಸಿದರು.

ಅತ್ಯಾಚಾರ ಘಟನೆ ಖಂಡನೀಯ. ಈ ಘಟನೆಯ ಕಾರಣಕ್ಕೆ ಹೆಣ್ಣು ಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳಲ್ಲಿ ಹೆಚ್ಚು ನಿಗಾ ವಹಿಸಬೇಕು. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ವ್ಯಾಪಕ ನಿಗಾ ಇರಿಸುವುದರ ಜತೆಗೆ, ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಈ ಬಗ್ಗೆ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು.
In an outrageous move, the University of Mysore has imposed restrictions on the movement of female students on campus after 6.30 pm from August 27 over the “safety of girl students”. This comes days after an MBA student was allegedly gangraped in Mysuru. No restrictions have been placed on male students.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm