ಬ್ರೇಕಿಂಗ್ ನ್ಯೂಸ್
02-09-21 04:16 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.2: ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ದೌರ್ಜನ್ಯ ಎಸಗಿ ಮತ್ತೊಬ್ಬ ಆರೋಪಿಯ ಮೂತ್ರ ಕುಡಿಸಿದ್ದ ಆರೋಪದಲ್ಲಿ ಪಿಎಸ್ಐ ಅರ್ಜುನ್ ಸಿಐಡಿ ಅಧಿಕಾರಿಗಳ ಬಂಧನಕ್ಕೀಡಾಗಿದ್ದು ಆತನಿಗೆ ಚಿಕ್ಕಮಗಳೂರು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ವಿವಾಹಿತ ಮಹಿಳೆಯೊಬ್ಬರಿಗೆ ಫೋನ್ ಮಾಡಿದ್ದ ಆರೋಪದಲ್ಲಿ ಮೇ 10ರಂದು ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ ಕೆ.ಎಲ್.ಪುನೀತ್ ಎಂಬಾತನನ್ನು ವಿಚಾರಣೆಗಾಗಿ ಪಿಎಸ್ಐ ಅರ್ಜುನ್ ಒಯ್ದಿದ್ದರು. ಪೊಲೀಸರು ಆತನಿಗೆ ಥಳಿಸಿ ಚಿತ್ರಹಿಂಸೆ ನೀಡಿದ್ದಲ್ಲದೆ, ನೀರು ಕೇಳಿದ್ದಕ್ಕೆ ಮತ್ತೊಬ್ಬ ಆರೋಪಿಯಲ್ಲಿ ಮೂತ್ರ ಮಾಡಿಸಿ, ಕೆಳಗೆ ಬಿದ್ದಿದ್ದ ಮೂತ್ರವನ್ನು ಬಲವಂತವಾಗಿ ಕುಡಿಸಿ ದೌರ್ಜನ್ಯ ಎಸಗಿದ್ದರು ಎಂದು ಪುನೀತ್ ಆರೋಪಿಸಿದ್ದರು. ಈ ಬಗ್ಗೆ ಕೇಸು ದಾಖಲಾಗಿದ್ದರಿಂದ ರಾಜ್ಯ ಸರಕಾರ ಪಿಎಸ್ಐ ಅರ್ಜುನ್ ಅವರನ್ನು ಸೇವೆಯಿಂದ ಹತ್ತು ದಿನಗಳ ಕಾಲ ಅಮಾನತು ಮಾಡಿದ್ದಲ್ಲದೆ, ಆನಂತರ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಿತ್ತು.
ಪ್ರಕರಣದ ಬಗ್ಗೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿ, ಪಿಎಸ್ಐ ಅರ್ಜುನ್ ಅವರನ್ನು ಪೊಲೀಸ್ ಇಲಾಖೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದವು.
ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಪಿಎಸ್ಐ ಅರ್ಜುನ್ ಚಿಕ್ಕಮಗಳೂರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದೇ ವೇಳೆ, ತನಿಖೆ ಕೈಗೆತ್ತಿಕೊಂಡಿದ್ದ ಸಿಐಡಿ ಪೊಲೀಸರು ನಿನ್ನೆ ರಾತ್ರಿ ಆರೋಪಿ ಅರ್ಜುನನ್ನು ಬಂಧಿಸಿದ್ದರು. ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಇಂದು ಚಿಕ್ಕಮಗಳೂರು ಕೋರ್ಟಿಗೆ ಹಾಜರು ಪಡಿಸಿದ್ದಾರೆ.
Read: ದಲಿತ ಯುವಕನಿಗೆ ಮೂತ್ರ ಕುಡಿಸಿ, ಚಿತ್ರಹಿಂಸೆ ; ಪಿಎಸ್ಐ ವಿರುದ್ಧ ಅದೇ ಠಾಣೆಯಲ್ಲಿ ಎಫ್ಐಆರ್ !
The 1st District and Satra court in Chikmagalur has imposed 14 days judicial custody of PSI Arjun for allegedly urinating on a youth of Dalit community. A complaint has been lodged against PSI Arjun for allegedly urinating on a young man from a Dalit community in Chikkamagalur district. The CID police yesterday arrested PSI Arjun in Bangalore in connection with the case.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am