ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm