ಬ್ರೇಕಿಂಗ್ ನ್ಯೂಸ್
            
                        03-09-21 01:22 pm Headline Karnataka News Network ಕರ್ನಾಟಕ
            ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
            
            
            Koppal Little Girl Celebrating Birthday in Father Graveyard.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm