ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am