ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
13-05-24 09:17 pm
Bangalore Correspondent
parishad elections, JDS, BJP: ಪರಿಷತ್ ಚುನಾವಣೆ...
13-05-24 05:57 pm
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
13-05-24 07:56 pm
HK News Desk
ಬುರ್ಖಾ ಹಾಕೊಂಡು ಬಂದಿದ್ದ ಮುಸ್ಲಿಂ ಮತದಾರರಿಗೆ ನಿಮ...
13-05-24 03:53 pm
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
13-05-24 10:15 pm
Mangalore Correspondent
Udupi former MLA Raghupati bhat quits BJP: ಬಂ...
13-05-24 07:27 pm
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
13-05-24 07:15 pm
Giridhar, Mangaluru Correspondent
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm