ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm