ಬ್ರೇಕಿಂಗ್ ನ್ಯೂಸ್
03-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.3: ಈ ಬಾರಿ ಕೊರೊನಾ ಎರಡನೇ ಅಲೆಗೆ ಎರಡು ತಿಂಗಳು ಲಾಕ್ಡೌನ್ ಆಗಿ ಬಹಳಷ್ಟು ಜನರು ತತ್ತರಗೊಂಡಿದ್ದರು. ಇದರಿಂದ ಹೊಟೇಲ್, ಇನ್ನಿತರ ಉದ್ಯಮ ಕ್ಷೇತ್ರಗಳು ಕೂಡ ಭಾರೀ ನಷ್ಟಕ್ಕೀಡಾಗಿದ್ದವು. ಆದರೆ, ಇದೇ ಅವಧಿಯಲ್ಲಿ ರಾಜ್ಯ ಸರಕಾರದ ಅಬಕಾರಿ ಇಲಾಖೆ ಮಾತ್ರ ಭರಪೂರ ಲಾಭ ಮಾಡಿಕೊಂಡಿದೆ. ಎಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ರಾಜ್ಯದ ಬೊಕ್ಕಸಕ್ಕೆ ಅಬಕಾರಿ ಇಲಾಖೆಯಿಂದ 10,197 ಕೋಟಿ ರೂಪಾಯಿ ಆದಾಯ ಬಂದಿದೆ.


ಈ ಅವಧಿಯಲ್ಲಿ 261 ಲಕ್ಷ ಬಾಕ್ಸ್ ಲಿಕ್ಕರ್ ಮತ್ತು 87 ಲಕ್ಷ ಬಾಕ್ಸ್ ಬೀಯರ್ ಮಾರಾಟ ಆಗಿದೆ. ಮದ್ಯ ಮಾರಾಟ ಹಿಂದಿನ ಅವಧಿಗೆ ಹೋಲಿಸಿದರೆ, 31 ಶೇಕಡಾದಷ್ಟು ಜಾಸ್ತಿಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಬಕಾರಿ ಇಲಾಖೆಯ ಆದಾಯ 7555 ಕೋಟಿ ರೂಪಾಯಿ ಆಗಿತ್ತು. ಈ ಬಾರಿಯ ಎಪ್ರಿಲ್(2202 ಕೋಟಿ), ಜೂನ್(2230 ಕೋಟಿ), ಜುಲೈ(2233 ಕೋಟಿ) ತಿಂಗಳಲ್ಲಿ ಮದ್ಯ ಮಾರಾಟ ಹಿಂದಿಗಿಂತ ಹೆಚ್ಚಿತ್ತು.
ಮುಂದಿನ ಆರ್ಥಿಕ ಸಾಲಿನಲ್ಲಿ ಅಬಕಾರಿ ಆದಾಯವನ್ನು 24,500 ಕೋಟಿಗೆ ಏರಿಸಲು ಇಲಾಖೆ ಗುರಿ ಇರಿಸಿದೆ. ಈ ಬಾರಿ ಬೀಯರ್ ಮಾರಾಟ ಹಿಂದಿಗಿಂತ ಹೆಚ್ಚಿರುವುದು ಕಂಡುಬಂದಿದೆ. ಕೊರೊನಾ ವೈರಸ್ ಭೀತಿಯ ಕಾರಣ ಬೀಯರ್ ಮಾರಾಟದ ಪ್ರಮಾಣ ತುಸು ಇಳಿಕೆಯಾಗಿತ್ತು. ಕಳೆದ ಎರಡು ತಿಂಗಳಲ್ಲಿ ಬೀಯರ್ ಮಾರಾಟವೂ ಹೆಚ್ಚಿದೆ.
karnataka state excise departments revenue grows earns 10197 crore in five months
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm