ಬ್ರೇಕಿಂಗ್ ನ್ಯೂಸ್
04-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4 : ವಿದ್ಯುತ್ ಬಿಲ್ನಲ್ಲಿ ಉದ್ದೇಶಪೂರ್ವಕ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡುತ್ತಿದ್ದ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಸೇವೆಯಿಂದ ಅಮಾನತು ಮಾಡಿದ್ದಾರೆ.
ಮುಳಬಾಗಿಲು ಉಪ ವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬವರೇ ಅಮಾನತುಗೊಂಡ ಸಿಬ್ಬಂದಿ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆ ಕೆಲವು ಬಿಲ್ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್ ಮೊತ್ತವನ್ನು ಉದ್ದೇಶಪೂರ್ವಕ ಕಡಿಮೆ ಮಾಡಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಾದ ಆದಾಯದಲ್ಲಿ ನಷ್ಟ ಉಂಟು ಮಾಡುತ್ತಿದ್ದರು.

ಇವರು ಬೇರೆ, ಬೇರೆ ಐಪಿ ವಿಳಾಸ ಹೊಂದಿರುವ ಗಣಕ ಯಂತ್ರಗಳಲ್ಲಿ ತಮ್ಮ ಐಡಿ ಉಪಯೋಗಿಸಿ ವಂಚನೆ ಎಸಗಿದ್ದರು. ಇದಲ್ಲದೆ, 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ನಷ್ಟವಾಗಿತ್ತು. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಈ ಬಗ್ಗೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
Bangalore Current Minister suspends three employees of Bescom for fraudental activities
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm