ಬ್ರೇಕಿಂಗ್ ನ್ಯೂಸ್
04-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4 : ವಿದ್ಯುತ್ ಬಿಲ್ನಲ್ಲಿ ಉದ್ದೇಶಪೂರ್ವಕ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡುತ್ತಿದ್ದ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಸೇವೆಯಿಂದ ಅಮಾನತು ಮಾಡಿದ್ದಾರೆ.
ಮುಳಬಾಗಿಲು ಉಪ ವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬವರೇ ಅಮಾನತುಗೊಂಡ ಸಿಬ್ಬಂದಿ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆ ಕೆಲವು ಬಿಲ್ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್ ಮೊತ್ತವನ್ನು ಉದ್ದೇಶಪೂರ್ವಕ ಕಡಿಮೆ ಮಾಡಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಾದ ಆದಾಯದಲ್ಲಿ ನಷ್ಟ ಉಂಟು ಮಾಡುತ್ತಿದ್ದರು.
ಇವರು ಬೇರೆ, ಬೇರೆ ಐಪಿ ವಿಳಾಸ ಹೊಂದಿರುವ ಗಣಕ ಯಂತ್ರಗಳಲ್ಲಿ ತಮ್ಮ ಐಡಿ ಉಪಯೋಗಿಸಿ ವಂಚನೆ ಎಸಗಿದ್ದರು. ಇದಲ್ಲದೆ, 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ನಷ್ಟವಾಗಿತ್ತು. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಈ ಬಗ್ಗೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
Bangalore Current Minister suspends three employees of Bescom for fraudental activities
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm